Select Your Language

Notifications

webdunia
webdunia
webdunia
webdunia

ಅಧಿಕಾರಿಗಳ ವರ್ಗಾವಣೆಯಿಂದ ನ್ಯಾಯಸಮ್ಮತ ಚುನಾವಣೆ ಸಾಧ್ಯವೇ- ದೇವೇಗೌಡ

ಅಧಿಕಾರಿಗಳ ವರ್ಗಾವಣೆಯಿಂದ ನ್ಯಾಯಸಮ್ಮತ ಚುನಾವಣೆ ಸಾಧ್ಯವೇ- ದೇವೇಗೌಡ
ಹಾಸನ , ಗುರುವಾರ, 25 ಜನವರಿ 2018 (19:34 IST)

ಚುನಾವಣೆ ಸಂದರ್ಭದಲ್ಲಿ ಅಧಿಕಾರಿಗಳ ವರ್ಗಾವಣೆ ಮಾಡುವ ರಾಜ್ಯ ಸರ್ಕಾರದಿಂದ ನ್ಯಾಯ ಸಮ್ಮತ ಚುನಾವಣೆ ನಡೆಯಲು ಹೇಗೆ ಸಾಧ್ಯ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಪ್ರಶ್ನಿಸಿದ್ದಾರೆ.

ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಮ್ಮನೆ ಆರೋಪ ಮಾಡಲ್ಲ. ಮಹಾ ಮಸ್ತಕಾಭಿಷೇಕ ಹಾಗೂ ಚುನಾವಣೆ ಸಿದ್ಧತೆಗಳು ನಡೆಯುವಾಗ ಜಿಲ್ಲಾಧಿಕಾರಿ ವರ್ಗಾವಣೆ ಅಗತ್ಯವಿತ್ತೇ ಎಂದು ಕೇಳಿದ್ದಾರೆ.

ಯಾರದೋ ಮುಲಾಜಿಗೆ ವರ್ಗಾವಣೆ ಮಾಡಲಾಗಿದೆ. ಕಾಮಗಾರಿಯನ್ನು ಪಿಡಬ್ಲ್ಯೂಡಿ ಇಲಾಖೆಯಿಂದ ವರ್ಗಾಯಿಸಲಾಗಿದೆ. ಎಲ್ಲದರಲ್ಲೂ ಹಣ ತಿಂದರೆ ಅಜೀರ್ಣವಾಗುವುದಿಲ್ಲವೇ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಭಾರತ ರತ್ನ ನೀಡಲು ಸಿಎಂ ಪತ್ರ