Webdunia - Bharat's app for daily news and videos

Install App

ಮೀನು ಹಿಡಿಯುತ್ತಿದ್ದ ವೇಳೆ ಘಟಪ್ರಭಾ ನದಿ ಹಿನ್ನೀರಿನಲ್ಲಿ ಮುಳುಗಿದ ತಂದೆ, ಇಬ್ಬರು ಮಕ್ಕಳು

Sampriya
ಸೋಮವಾರ, 18 ನವೆಂಬರ್ 2024 (14:56 IST)
Photo Courtesy X
ಬೆಳಗಾವಿ: ಇಲ್ಲಿನ ಯಮಕನಮರಡಿ ಸಮೀಪದ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ಮೀನು ಹಿಡಿಯಲು ಹೋಗಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿದ ಘಟನೆ  ನಡೆದಿದೆ. ಸೋಮವಾರ ಬೆಳಿಗ್ಗೆಯಿಂದ ಅವರಿಗಾಗಿ ಹುಡುಕಾಟ ನಡೆದಿದೆ.

ಬೆನಕನಹೊಳಿಯ ಲಕ್ಷ್ಮಣ ರಾಮ ಅಂಬಲಿ(45), ಅವರ ಮಕ್ಕಳಾದ ರಮೇಶ (15), ಯಲ್ಲಪ್ಪ (13) ಎಂದು ನೀರುಪಾಲಾದವರು

ಮೂಲಗಳ ಪ್ರಕಾರ ತಂದೆ ಲಕ್ಷ್ಮಣ ಹಾಗೂ ಅವರ ಮಕ್ಕಳು ಘಟಪ್ರಭಾ ನದಿ ಸೇತುವೆ ಮೇಲೆ ಭಾನುವಾರ ಸಂಜೆ ಬೈಕ್ ನಿಲ್ಲಿಸಿ, ಮೀನು ಹಿಡಿಯಲು ನದಿ‌ ನೀರಿಗೆ ಇಳಿದಿದ್ದರು. ಆದರೆ, ಸೋಮವಾರ ಬೆಳಿಗ್ಗೆಯವರೆಗೂ ಮನೆಗೆ ಬಾರದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಈ ವೇಳೆ ಮೂವರು ನೀರಿನಲ್ಲಿ ಮುಳುಗಿರುವ ಕುರಿತು ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈಗ ಎನ್.ಡಿ.ಆರ್.ಎಫ್ ತಂಡದವರು ಹಾಗೂ ಯಮಕನಮರಡಿ ಠಾಣೆ ಪೊಲೀಸರು ನೀರುಪಾಲಾಗಿರುವ ಮೂವರ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯಾದ್ಯಂತ ಇಂದಿನ ಹವಾಮಾನ ವರದಿ ಇಲ್ಲಿದೆ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂದಿನ ಸುದ್ದಿ
Show comments