Select Your Language

Notifications

webdunia
webdunia
webdunia
webdunia

ಮಗಳನ್ನು ಕೊಂದಿದ್ದಲ್ಲದೇ ಆತ್ಮಹತ್ಯೆಗೆ ಶಾರಣಾದ ತಂದೆ!?

ಮಗಳನ್ನು ಕೊಂದಿದ್ದಲ್ಲದೇ ಆತ್ಮಹತ್ಯೆಗೆ ಶಾರಣಾದ ತಂದೆ!?
ಬೆಂಗಳೂರು , ಗುರುವಾರ, 24 ಫೆಬ್ರವರಿ 2022 (07:47 IST)
ಬೆಂಗಳೂರು : ಹಣಕಾಸಿನ ತೊಂದರೆಯಿಂದ ಏಳು ವರ್ಷದ ಮಗಳನ್ನು ಕೊಂದು ತಂದೆ ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ.

ವಿಜಯಕುಮಾರ್ (39) ಆತ್ಮಹತ್ಯೆ ಮಾಡಿಕೊಂಡ ತಂದೆ. ಹೆಂಡತಿ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗಿದ್ದ ವೇಳೆ ವಿಜಯಕುಮಾರ್ ತನ್ನ ಏಳು ವರ್ಷದ ಮಗಳು ಸಮೀಕ್ಷಾಳನ್ನು ತಲೆದಿಂಬು, ಚಾರ್ಜರ್ ವೈರ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ. ಬಳಿಕ ವಿಜಯ್ ಕುಮಾರ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

ವೆಲ್ಡರ್ ಕೆಲಸ ಮಾಡಿಕೊಂಡಿದ್ದ ವಿಜಯ್ ಕುಮಾರ್ ಮೂಲತಃ ಕೋಲಾರ ಜಿಲ್ಲೆಯ ಬಂಗಾರಪೇಟೆಯವರಾಗಿದ್ದಾರೆ. ಬೊಮ್ಮಸಂದ್ರದಲ್ಲಿ ರೇವಣ್ಣ ಅವರ ಮನೆಯಲ್ಲಿ ವಾಸವಾಗಿದ್ದರು.

ನಂತರ ಘಟನಾ ಸ್ಥಳಕ್ಕೆ ಆಗಮಿಸಿ ಪರೀಶಿಲನೆ ನಡೆಸಿದ ಡಿವೈಎಸ್ಪಿ ಮಲ್ಲೇಶ್ ಹೆಬ್ಬಗೋಡಿ ಪೊಲೀಸರಿಗೆ ವಿಜಯ್ಕುಮಾರ್ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಆಧಾರ್ ಕಾರ್ಡ್ನಲ್ಲಿ ಹಿಜಬ್ ಧರಿಸಿಲ್ಲ