Webdunia - Bharat's app for daily news and videos

Install App

ಒಬ್ಬ ಮಗನ ಭವಿಷ್ಯ ರೂಪಿಸಲು ತನ್ನ ಇನ್ನೊಬ್ಬ ಮಗನನ್ನು ಕೊಂದ ತಂದೆ!

Webdunia
ಬುಧವಾರ, 19 ಜುಲೈ 2023 (15:06 IST)
ಬೆಳಗಾವಿ : ಕಳೆದ ಮೇ 31ರಂದು ಪಟ್ಟಣದ ಹೊರವಲಯದ ಮಲಪ್ರಭಾ ನದಿತೀರದಲ್ಲಿ ಪತ್ತೆಯಾದ ಅಪರಿಚಿತ ಯುವಕನ ಅಸಹಜ ಸಾವಿನ ಪ್ರಕರಣವನ್ನು ಬೇಧಿಸಿರುವ ಖಾನಾಪುರ ಠಾಣೆಯ ಪೊಲೀಸರು ಪ್ರಕರಣದ ಆರೋಪಿಯನ್ನು ಮಂಗಳವಾರ ಬಂಧಿಸಿದ್ದಾರೆ.
 
ಮಾನಸಿಕವಾಗಿ ಅಸ್ವಸ್ಥನಾಗಿದ್ದ ತನ್ನ ಹಿರಿಯ ಮಗ ಬದುಕಿರುವವರೆಗೆ ಕಿರಿಯ ಮಗನ ಮದುವೆಗೆ ಅಡಚಣೆಯಾಗುತ್ತದೆ ಎಂದು ಭಾವಿಸಿ ತಂದೆಯೇ ತನ್ನ ಹಿರಿಯ ಮಗನಿಗೆ ವಿಷವುಣಿಸಿ ಕೊಲೆಗೈದಿರುವುದಾಗಿ ಪೊಲೀಸರ ತನಿಖೆಯಲ್ಲಿ ಧೃಡಪಟ್ಟಿದೆ. ಬಂಧಿತ ತಂದೆಯನ್ನು ಪೊಲೀಸರು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಏನಿದು ಘಟನೆ?
ಖಾನಾಪುರ ಪಟ್ಟಣದ ಬಳಿ ಮಲಪ್ರಭಾ ನದಿತೀರದಲ್ಲಿ ಪತ್ತೆಯಾದ ಅಪರಿಚಿತ ಶವದ ಮರಣೋತ್ತರ ತನಿಖೆ ನಡೆಸಿದ್ದ ಪೊಲೀಸರಿಗೆ ಮೃತ ವ್ಯಕ್ತಿ ವಿಷ ಸೇವಿಸಿದ್ದು, ಜೊತೆಗೆ ಆತನ ತಲೆಗೆ ಬಲವಾಗಿ ಪೆಟ್ಟು ಬಿದ್ದಿರುವುದು ತಿಳಿದುಬಂದಿತ್ತು. ಹೀಗಾಗಿ ಪೊಲೀಸರು ಈ ಪ್ರಕರಣವನ್ನು ಅನುಮಾನಾಸ್ಪದ ಸಾವು ಎಂದು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ಪ್ರಕರಣ ದಾಖಲಾಗಿ ಕೆಲದಿನಗಳ ಬಳಿಕ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಆತ ಹುಕ್ಕೇರಿ ತಾಲೂಕಿನ ಬೋರಗಲ್ ಗ್ರಾಮದ ನಿವಾಸಿ ನಿಖಿಲ್ ರಾಜಕುಮಾರ ಮಗದುಮ್ಮ (24) ಎಂದು ಪೊಲೀಸರಿಗೆ ತಿಳಿದುಬಂದಿತ್ತು. ನಿಖಿಲ್ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು ಜುಲೈ 7ರಂದು ಆತನ ಚಿಕ್ಕಪ್ಪ ಸಂತೋಷ್ ಮಗದುಮ್ಮ ಅವರನ್ನು ಠಾಣೆಗೆ ಕರೆಸಿ ವಿಚಾರಿಸಿದಾಗ ಅವರು ತಮ್ಮ ಅಣ್ಣ ರಾಜಕುಮಾರ ಶಂಕರ ಮಗದುಮ್ಮ (45) ನಿಖಿಲ್ ಕೊಲೆ ಮಾಡಿರುವುದಾಗಿ ತಿಳಿಸಿ ರಾಜಕುಮಾರ ವಿರುದ್ಧ ದೂರು ನೀಡಿದ್ದರು. 

ರಾಜಕುಮಾರ ಅವರನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದ ಪೊಲೀಸರು ಅವರನ್ನು ವಿಚಾರಣೆ ನಡೆಸಿದಾಗ ತಮ್ಮ ಹಿರಿಯ ಮಗ ನಿಖಿಲ್ ಮಾನಸಿಕ ಅಸ್ವಸ್ಥನಿದ್ದು, ಆತ ಬದುಕಿರುವವರೆಗೆ ಕಿರಿಯ ಮಗ ನಿತೀಶ್ನ ಮದುವೆ ಮಾಡಲು ತೊಂದರೆ ಆಗುತ್ತದೆ ಎಂದು ಭಾವಿಸಿ ಆತನನ್ನು ಮೇ 30ರಂದು ಬೋರಗಲ್ ಗ್ರಾಮದ ತಮ್ಮ ಮನೆಯಿಂದ ಪಟ್ಟಣದ ಮಲಪ್ರಭಾ ನದಿಯ ಬಳಿ ಕರೆದುಕೊಂಡು ಹೋಗಿ ವಿಷ ಕುಡಿಸಿ, ಗಿಡಕ್ಕೆ ಜೋರಾಗಿ ತಲೆ ಹಾಯಿಸಿ ಕೊಲೆ ಮಾಡಿರುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

ಮುಂದಿನ ಸುದ್ದಿ
Show comments