Webdunia - Bharat's app for daily news and videos

Install App

ಮಗಳಿಗೆ ವಿಷ ಕುಡಿಸಿ ಕೊಲೆ ಮಾಡಿದ ತಂದೆ. ಕಾರಣವೇನು ಗೊತ್ತಾ?

Webdunia
ಶುಕ್ರವಾರ, 11 ಜನವರಿ 2019 (12:41 IST)
ಕಾರವಾರ : ಮಗಳ  ಚಿಕಿತ್ಸೆಗೆ ಹಣ ಖರ್ಚು ಮಾಡಲಾಗದೇ ತಂದೆ ಮಗಳಿಗೆ  ವಿಷ ಕುಡಿಸಿ ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕುಂಬ್ರಿಯಲ್ಲಿ ನಡೆದಿದೆ.


ನಯನಾ(11) ತಂದೆಯಿಂದ ಕೊಲೆಯಾದ ಮಗಳು. ನಾಗರಾಜ್ ಪೂಜಾರಿ(44) ಕೊಲೆ ಮಾಡಿದ ತಂದೆ. ಈತ ಮೂರು ಜನ ಹೆಣ್ಣು ಮಕ್ಕಳನ್ನು ಹೊಂದಿದ್ದು, ನಯನಾ ಕೊನೆಯ ಮಗಳಾಗಿದ್ದು, ಹೃದಯ ಕಾಯಿಲೆಯಿಂದ ಬಳಲುತ್ತಿದ್ದಳು. ಈ ಹಿಂದೆ ನಾಗರಾಜ್ ದಾನಿಗಳ ಸಹಾಯದಿಂದ ನಯನಾಗೆ ಬೈಪಾಸ್ ಸರ್ಜರಿ ಮಾಡಿಸಿದ್ದನು. ಆದರೆ ಹಣದ ಸಮಸ್ಯೆಯಿಂದ ನೊಂದ ಆತ ಕುಡಿಯುವ ಚಟ ಬೆಳೆಸಿಕೊಂಡಿದ್ದನು. ಇದರಿಂದ ಆತನ ಪತ್ನಿ ಆತನಿಂದ ದೂರವಾಗಿದ್ದಳು.


ಬುಧವಾರ ನಯನಾ ತಾಯಿ ಬೇಕೆಂದು ಹಠ ಹಿಡಿದಿದ್ದಳು. ಇದರಿಂದ ನಾಗರಾಜ್ ಇನ್ನಷ್ಟು ಕೋಪಗೊಂಡು ಮಗಳಿಗೆ ಕ್ರಿಮಿನಾಶಕ ತಿನ್ನಿಸಿ ಕೊಲೆ ಮಾಡಿದ್ದಾನೆ. ಈ ಬಗ್ಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments