Webdunia - Bharat's app for daily news and videos

Install App

ಅಶ್ಲೀಲ ವಿಡಿಯೋ ಫೊಟೋ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

Webdunia
ಮಂಗಳವಾರ, 4 ಅಕ್ಟೋಬರ್ 2022 (21:17 IST)
ಸಹೋದರಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋವನ್ನು ತೆಗೆದಿದ್ದಕ್ಕೆ ಆಕ್ರೋಶಗೊಂಡಿದ್ದ ದರ್ಶನ್, ತನ್ನ ಸಹಚರ ಆಶ್ರಯ್ ಜೊತೆ ಸೇರಿಕೊಂಡು ದೊಡ್ಡಬಳ್ಳಾಪುರ ಮೂಲದ ನಂದಾ ಎಂಬಾತನನ್ನ ಕೊಲೆ ಮಾಡಿದ್ದಾರೆ.
 
ದೊಡ್ಡಬಳ್ಳಾಫುರ ಮೂಲದ ಯುವಕ ನಂದಾ  ಎಂಬಾತ ಚಿಕ್ಕಬಳ್ಳಾಫುರ ತಾಲೂಕಿನ ಹಾರೋಬಂಡೆ ಗ್ರಾಮದ ದರ್ಶನ್ ಎಂಬ ಯುವಕನ ಸಹೋದರಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋವನ್ನು ತೆಗೆದಿದ್ದನು. ಈ ಸಂಬಂಧ ಇಬ್ಬರ ನಡುವೆ ಪದೇಪದೇ ಜಗಳ ನಡೆಯುತ್ತಿತ್ತು. ಇದೀಗ ಹಾರೋಬಂಡೆ ಗ್ರಾಮದ ಬಳಿ ನಂದಾ ಹೆಣವಾಗಿ ಬಿದ್ದಿದ್ದು, ವಿಡಿಯೋ, ಫೋಟೋ ವಿಚಾರಕ್ಕೆ ದ್ವೇಷದಿಂದ ದರ್ಶನ್ ಮತ್ತು ಆತನ ಸ್ನೇಹಿತ ಆಶ್ರಯ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಇನ್ನೂ ವಿಷಯ ತಿಳಿದ ಕುಟುಂಭಸ್ಥರಿಗೆ ಶಾಕ್ ಆಗಿದ್ದು ,ಜಗಳ ಮಾಡಿಕೊಳ್ಳುವುದು ಬಿಟ್ಟು ನಮ್ಮ ಗಮನಕ್ಕೆ ತಂದಿದ್ದರೆ ನಮ್ಮ ಮಗನನ್ನು ನಾವು ಭದ್ರಪಡಿಸಿಕೊಳ್ಳುತ್ತಿದ್ವಿ ,ಇದ್ದ ಒಬ್ಬ ಮಗನನ್ನು ಕೊಲೆ ಮಾಡಿ ನಮ್ಮನ್ನ ಅನಾಥ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ .
 
ನನ್ನ  ತಮ್ಮ  ನಂದಾ ಮುನ್ಸಿಪಲ್ ಕಾಲೇಜಿನಲ್ಲಿ ಸೆಕೆಂಡ್ ಇಯರ್  ಡಿಗ್ರಿ ಒದುತಿದ್ದ  ನಮ್ಮ  ತಾಯಿ ಒಬ್ಬಳ ದುಡಿಮೆ ಸಾಲಲ್ಲ ಅಂತ ಗಾರ್ಮೆಂಟ್ಸ್ ನಲ್ಲಿ ಪಾರ್ಟ್ ಟೈಮ್ ಕೆಲಸಕ್ಕೆ ಮಾಡ್ತಿದ್ದ  ,  ಎಲ್ಲರೊಂದಿಗೆ ಲವಲವಿಕೆಯಿಂದ ಇದ್ದ ಪ್ರತಿದಿನ ಕಾಲ್ ಮಾಡಿ ಕಾಮಿಡಿ ಮಾಡ್ತಿದ್ದ ,  ನಮ್ಮ ತಾಯಿ  ಇತ್ತೀಚೆಗಷ್ಟೇ ಹೊಸ ಬೈಕ್ ಕೊಡಿಸಿದ್ರು ,ದರ್ಶನ್ ತಂಗೀನೆ ಹಲವು ಬಾರಿ ನಮ್ಮ ಮನೆ ಕಡೆ ನೋಡಿಕೊಂಡು ಹೋಗ್ತಿದ್ಲು , ಅವರ ಸಹವಾಸ  ಬೇಡ ಎಂದು ಬುದ್ದಿ ಹೇಳಿದ್ವಿ ,ಇದೇ ವಿಚಾರಕ್ಕೆ ಜಗಳ ಆಗಿರುವ ಬಗ್ಗೆ ನಡೆದಿತ್ತು, ಆದರೆ ನಮಗೆ ಗೊತ್ತಾಗಿರಲಿಲ್ಲ, ಈ ಬಗ್ಗೆ ದರ್ಶನ್ ಮತ್ತು‌ ಆತನ ಸ್ನೇಹಿತರನ್ನು ಯಾಕೆ ಜಗಳ ಮಾಡಿಕೊಂಡ್ರಿ ಅಂತ ಕೇಳಿದ್ರೆ ನಿಮಗೆ ಮುಂದೆ ಗೊತ್ತಾಗುತ್ತೆ ಅಂತ ಹೇಳಿದ್ರು ಈ ರೀತಿ ಮಾಡ್ತಾರೆ ಅಂತ ಗೊತ್ತಾಗಲಿಲ್ಲ  ಅಂತ ಮೃತನ ಸಹೋದರಿ ಚೈತ್ರ ಹೇಳಿದ್ದಾಳೆ .
 
ಇನ್ನೂ ಬರ್ಬರ ಕೊಲೆ ವಿಚಾರ ತಿಳಿದ ಚಿಕ್ಕಬಳ್ಳಾಫುರ ಗ್ರಾಮಾಂತರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ  ಇಬ್ಬರ ಮೇಲೂ ಕೊಲೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ