Select Your Language

Notifications

webdunia
webdunia
webdunia
webdunia

ಟಿಕೆಟ್ ಕೊಡದಿದ್ದರೆ ಕಾಂಗ್ರೆಸ್​ಗೆ ಹೋಗುತ್ತೇನೆ ಎಂದ ಬಿಜೆಪಿ ಮಾಜಿ ಶಾಸಕ

ಟಿಕೆಟ್ ಕೊಡದಿದ್ದರೆ ಕಾಂಗ್ರೆಸ್​ಗೆ ಹೋಗುತ್ತೇನೆ ಎಂದ ಬಿಜೆಪಿ ಮಾಜಿ ಶಾಸಕ
ಕಾಗೆವಾಡ , ಶನಿವಾರ, 12 ಅಕ್ಟೋಬರ್ 2019 (12:31 IST)
ಕಾಗೆವಾಡ : ಈ ಬಾರಿ ನನಗೆ ಟಿಕೆಟ್ ಕೊಡಿ ಇಲ್ಲವಾದರೆ ಕಾಂಗ್ರೆಸ್​ಗೆ ಹೋಗುತ್ತೇನೆ ಎಂದು ಬಿಜೆಪಿಯ ಮಾಜಿ ಶಾಸಕ ರಾಜು ಕಾಗೆ ಅಸಮಾಧಾನ ಹೊರಹಾಕಿದ್ದಾರೆ.




ಕಾಗೆವಾಡ ಕ್ಷೇತ್ರದ ಅನರ್ಹ ಶಾಸಕ ಶ್ರೀಮಂತ ಪಾಟೀಲ್ ​​ಗೆ ಬಿಜೆಪಿ ಟಿಕೆಟ್ ನೀಡುವ ಹಿನ್ನೆಲೆ, ಬಿಜೆಪಿಯ ಮಾಜಿ ಶಾಸಕ ರಾಜು ಕಾಗೆ ಅವರನ್ನು ಸಮಾಧಾನ ಮಾಡಲು ಕಾಡಾ ನಿಗಮ ಮಂಡಳಿ ಸ್ಥಾನ ನೀಡಲಾಗಿತ್ತು. ಈ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ಬಿಜೆಪಿ ನಾಯಕರು ಆಪ್ತರನ್ನು ತಿರಸ್ಕಾರ ಮಾಡಿದ್ದಾರೆ. ಕಾಡಾ ನಿಗಮ ಮಂಡಳಿ ಸ್ಥಾನ ನನ್ನ ಯೋಗ್ಯತೆಗೆ ತಕ್ಕ ಸ್ಥಾನ ಅಲ್ಲ. ನಾನು ನಾಲ್ಕು ಬಾರಿ ಶಾಸಕನಾಗಿ ಕೆಲಸ ಮಾಡಿದ ವ್ಯಕ್ತಿ. ಒಬ್ಬ ಜಿಲ್ಲಾ ಪಂಚಾಯತ್​ ಸದಸ್ಯನಿಗೆ ನೀಡುವ ಸ್ಥಾನವನ್ನು ನನಗೆ ಕೊಟ್ಟಿದ್ದಾರೆ  ಎಂದು ಕಿಡಿಕಾರಿದ್ದಾರೆ.


ಅನರ್ಹ ಶಾಸಕ ಶ್ರೀಮಂತ ಪಾಟೀಲ್​ ಟಿಕೆಟ್​ ನೀಡಲು ನನಗೆ ನಿಗಮ ಮಂಡಳಿ ಸ್ಥಾನ ನೀಡಲಾಗಿದೆ. ನನಗೆ ಟಿಕೆಟ್ ಕೊಡಿ, ಇಲ್ಲವಾದರೆ ಕಾಂಗ್ರೆಸ್ ​ಗೆ ಹೋಗುತ್ತೇನೆ. ಈಗಾಗಲೇ ಕಾಂಗ್ರೆಸ್ ​ನವರು ನನ್ನನ್ನು ಸಂಪರ್ಕ ಮಾಡಿದ್ದಾರೆ. ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದ್ದೇನೆ. ಪಕ್ಷದಲ್ಲಿ ಸರಿಯಾದ ಸ್ಥಾನಮಾನ ನೀಡದೆ ಹೋದಲ್ಲಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಖಡಕ್ ಆಗಿ ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಆಡಳಿತ ಪಕ್ಷದ ವಿರುದ್ಧ ಟ್ವೀಟರ್ ನಲ್ಲಿ ಕಿಡಿಕಾರಿದ ಸಿದ್ದರಾಮಯ್ಯ