Webdunia - Bharat's app for daily news and videos

Install App

ಟಿಕೆಟ್ ಕೊಡದಿದ್ದರೆ ಕಾಂಗ್ರೆಸ್​ಗೆ ಹೋಗುತ್ತೇನೆ ಎಂದ ಬಿಜೆಪಿ ಮಾಜಿ ಶಾಸಕ

Webdunia
ಶನಿವಾರ, 12 ಅಕ್ಟೋಬರ್ 2019 (12:31 IST)
ಕಾಗೆವಾಡ : ಈ ಬಾರಿ ನನಗೆ ಟಿಕೆಟ್ ಕೊಡಿ ಇಲ್ಲವಾದರೆ ಕಾಂಗ್ರೆಸ್​ಗೆ ಹೋಗುತ್ತೇನೆ ಎಂದು ಬಿಜೆಪಿಯ ಮಾಜಿ ಶಾಸಕ ರಾಜು ಕಾಗೆ ಅಸಮಾಧಾನ ಹೊರಹಾಕಿದ್ದಾರೆ.




ಕಾಗೆವಾಡ ಕ್ಷೇತ್ರದ ಅನರ್ಹ ಶಾಸಕ ಶ್ರೀಮಂತ ಪಾಟೀಲ್ ​​ಗೆ ಬಿಜೆಪಿ ಟಿಕೆಟ್ ನೀಡುವ ಹಿನ್ನೆಲೆ, ಬಿಜೆಪಿಯ ಮಾಜಿ ಶಾಸಕ ರಾಜು ಕಾಗೆ ಅವರನ್ನು ಸಮಾಧಾನ ಮಾಡಲು ಕಾಡಾ ನಿಗಮ ಮಂಡಳಿ ಸ್ಥಾನ ನೀಡಲಾಗಿತ್ತು. ಈ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ಬಿಜೆಪಿ ನಾಯಕರು ಆಪ್ತರನ್ನು ತಿರಸ್ಕಾರ ಮಾಡಿದ್ದಾರೆ. ಕಾಡಾ ನಿಗಮ ಮಂಡಳಿ ಸ್ಥಾನ ನನ್ನ ಯೋಗ್ಯತೆಗೆ ತಕ್ಕ ಸ್ಥಾನ ಅಲ್ಲ. ನಾನು ನಾಲ್ಕು ಬಾರಿ ಶಾಸಕನಾಗಿ ಕೆಲಸ ಮಾಡಿದ ವ್ಯಕ್ತಿ. ಒಬ್ಬ ಜಿಲ್ಲಾ ಪಂಚಾಯತ್​ ಸದಸ್ಯನಿಗೆ ನೀಡುವ ಸ್ಥಾನವನ್ನು ನನಗೆ ಕೊಟ್ಟಿದ್ದಾರೆ  ಎಂದು ಕಿಡಿಕಾರಿದ್ದಾರೆ.


ಅನರ್ಹ ಶಾಸಕ ಶ್ರೀಮಂತ ಪಾಟೀಲ್​ ಟಿಕೆಟ್​ ನೀಡಲು ನನಗೆ ನಿಗಮ ಮಂಡಳಿ ಸ್ಥಾನ ನೀಡಲಾಗಿದೆ. ನನಗೆ ಟಿಕೆಟ್ ಕೊಡಿ, ಇಲ್ಲವಾದರೆ ಕಾಂಗ್ರೆಸ್ ​ಗೆ ಹೋಗುತ್ತೇನೆ. ಈಗಾಗಲೇ ಕಾಂಗ್ರೆಸ್ ​ನವರು ನನ್ನನ್ನು ಸಂಪರ್ಕ ಮಾಡಿದ್ದಾರೆ. ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದ್ದೇನೆ. ಪಕ್ಷದಲ್ಲಿ ಸರಿಯಾದ ಸ್ಥಾನಮಾನ ನೀಡದೆ ಹೋದಲ್ಲಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಖಡಕ್ ಆಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments