Webdunia - Bharat's app for daily news and videos

Install App

ಹಣದಾಸೆಗಾಗಿ ಸ್ನೇಹಿತನನ್ನೇ ಕಾರಿನಲ್ಲಿ ಅಪಹರಿಸಿ, ಹಲ್ಲೆಗೈದು, ಲಕ್ಷಾಂತರ ರೂಪಾಯಿ ಹಣ ವಸೂಲಿ

Webdunia
ಸೋಮವಾರ, 22 ನವೆಂಬರ್ 2021 (21:09 IST)
ಬೆಂಗಳೂರು: ಹಣದಾಸೆಗಾಗಿ ಸ್ನೇಹಿತನನ್ನೇ ಕಾರಿನಲ್ಲಿ ಅಪಹರಿಸಿ, ಹಲ್ಲೆಗೈದು, ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿದ ಆರೋಪದಡಿ ಐವರು ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
ಪ್ರಜ್ವಲ್, ಅನಿಲ್ ಕುಮಾರ್, ದೀಪು ಸೇರಿ ಐವರು ಬಂಧಿತರು.
ಖಾಸಗಿ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿರುವ ಅಭಿಷೇಕ್, ಕಾಲೇಜು ಮುಗಿದ ನಂತರ ರಿಯಲ್ ಎಸ್ಟೇಟ್ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈತನ ತಂದೆ ಆಟೋ ಚಾಲಕನಾಗಿದ್ದ ನಾಗರಬಾವಿ ಬಳಿಯ ಪಾಪರೆಡ್ಡಿಪಾಳ್ಯ ಬಳಿ ವಾಸವಾಗಿದ್ದರು. ರಿಯಲ್ ಎಸ್ಟೇಟ್ ಕೆಲಸ ಮಾಡುವ ಕಚೇರಿಯಲ್ಲಿ ನಿರಂತರ ಹಣದ ವಹಿವಾಟು ನಡೆಸುವ ಸಲುವಾಗಿ ಅಭಿಷೇಕ್ ಬಳಿ ಯಾವಾಗಲೂ ನಗದು ಇರುತ್ತಿತ್ತು. ಇದನ್ನು ಕಂಡ ಸ್ನೇಹಿತರು ಅಭಿಷೇಕ್ ಶ್ರೀಮಂತ ಎಂದು ಭಾವಿಸಿ ಅಪಹರಣ ಮಾಡಲು ಹೊಂಚು ಹಾಕಿದ್ದಾರೆ. ಅಪಹರಣಕ್ಕಾಗಿ ನೆರವು ಪಡೆಯಲು ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿರುವ ಪ್ರಜ್ವಲ್, ಅನಿಲ್ ಕುಮಾರ್ ಹಾಗೂ ದೀಪು ಎಂಬವರಿಗೆ ಮಾಹಿತಿ ನೀಡಲಾಗಿದೆ. ಇದರಂತೆ ನ.18ರಂದು ಅಂದುಕೊಂಡಂತೆ ಮುಸುಕುವೇಷ ಧರಿಸಿ ಕಾರಿನಲ್ಲಿ ಅಭಿಷೇಕ್‌ನನ್ನು ಅಪಹರಿಸಿದ್ದಾರೆ. ನಂತರ ಡಾಬಸ್ ಪೇಟೆ ಬಳಿ ಹೋಗಿ ಅಲ್ಲಿಂದ ದೇವನಹಳ್ಳಿಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ಅಭಿಷೇಕ್ ತಂದೆಗೆ ಕರೆ ಮಾಡಿ 1 ಲಕ್ಷ ರೂಪಾಯಿಗೆ ಬೇಡಿಕೆ ಕೂಡ ಇದೆ. ಅಂತಿಮವಾಗಿ ಅಭಿಷೇಕ್ ನಿಂದ 70 ಸಾವಿರ ಹಣ ಪಡೆದಿದ್ದರು. ಜೊತೆಗೆ, ಅಪಹರಣ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments