Webdunia - Bharat's app for daily news and videos

Install App

ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ! ಅಪರಾಧಿಗೆ ಜೀವಾವಧಿ ಶಿಕ್ಷೆ

Webdunia
ಶುಕ್ರವಾರ, 18 ಆಗಸ್ಟ್ 2023 (08:35 IST)
ಶಿವಮೊಗ್ಗ : ಸ್ನೇಹಿತನ ಮೇಲಿನ ದ್ವೇಷಕ್ಕೆ ಆತನ ಮಗನನ್ನು ಅಪಹರಿಸಿ, ನದಿಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದ ವ್ಯಕ್ತಿಗೆ ಶಿವಮೊಗ್ಗ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 3.25 ಲಕ್ಷ ರೂ. ದಂಡ ವಿಧಿಸಿದೆ.

ಜಿಲ್ಲೆಯ ಶಿಕಾರಿಪುರ ತಾಲೂಕಿನ ಚುರ್ಚಿಗುಂಡಿ ಗ್ರಾಮದ ಎನ್ಎಂ ಬಸವರಾಜಪ್ಪ (40) ಶಿಕ್ಷೆಗೆ ಒಳಗಾದ ಅಪರಾಧಿ. ಶಿವಮೊಗ್ಗದ ಆಲ್ಕೊಳ ನಿವಾಸಿ ನಿಂಗರಾಜು ಮತ್ತು ಬಸವರಾಜಪ್ಪ ಮೊದಲಿನಿಂದ ಪರಿಚಿತರು.

ನಿಂಗರಾಜು ಮೇಲಿನ ಹಳೇ ದ್ವೇಷಕ್ಕೆ ಆತನ ಮಗ ಪ್ರೇಮ್ ಕುಮಾರ್ನನ್ನು (8) ಬಸವರಾಜಪ್ಪ ಅಪಹರಣ ಮಾಡಿದ್ದ. 2017ರ ಮಾರ್ಚ್ 2 ರಂದು ಆಳ್ಕೊಳ ಸರ್ಕಲ್ನಿಂದ ಅಪಹರಣ ಮಾಡಿ, ಚುರ್ಚಿಗುಂಡಿ ಹತ್ತಿರ ಕುಮದ್ವತಿ ನದಿ ಬಳಿ ಕರೆದೊಯ್ದು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದ. 

ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿತ್ತು. ದೊಡ್ಡಪೇಟೆ ಠಾಣೆ ಇನ್ಸ್ಪೆಕ್ಟರ್ ಕೆಟಿ ಗುರುರಾಜ್ ಪ್ರಕರಣದ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಲ್ಲದೇ ಆತನ ವಿರುದ್ಧ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments