Webdunia - Bharat's app for daily news and videos

Install App

ಪತ್ನಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಸ್ನೇಹಿತನನ್ನು 16 ಬಾರಿ ಇರಿದು ಕೊಂದ

Webdunia
ಭಾನುವಾರ, 3 ಫೆಬ್ರವರಿ 2019 (07:21 IST)
ಬೆಂಗಳೂರು : ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಹೆಂಡತಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಸ್ನೇಹಿತನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ನೀಲಸಂದ್ರ ಬಳಿಯ ರೋಸ್ ಗಾರ್ಡನ್ 6ನೇ ಕ್ರಾಸ್ ನಲ್ಲಿ ನಡೆದಿದೆ.


ಅರುಳ್ ರಾಜ್ (36) ಕೊಲೆಯಾದ ದುರ್ದೈವಿ, ಅರುಣ್ ಎಂಬಾತನೇ ಚಾಕುವಿನಿಂದ ಇರಿದ ಆರೋಪಿ. ಇವರಿಬ್ಬರು ಸ್ನೇಹಿತರಾಗಿದ್ದರು. ಆದರೆ ಅರುಣ್ ಪತ್ನಿ, ಅರುಳ್ ರಾಜ್ ಜೊತೆ ಅಕ್ರಮ ಸಂಬಂಧದ ಹೊಂದಿದ್ದಳು. ಈ ವಿಚಾರ ರಾತ್ರಿ ಇಬ್ಬರು ಒಟ್ಟಿಗೆ ಬಾರ್ ಗೆ ಹೋಗಿ ಕುಡಿದು ಗಲಾಟೆ ಮಾಡಿಕೊಂಡ ವೇಳೆ ಬಹಿರಂಗಗೊಂಡಿದೆ.


ವಿಷಯ ತಿಳಿದು ಕೋಪಗೊಂಡ ಅರುಣ್ ಬಾರ್ ನಿಂದ ಹೊರಗೆ ಬಂದ ವೇಳೆ ಅರುಳ್ ರಾಜ್ ಗೆ 16 ಬಾರಿ ಚುಚ್ಚಿ ಕೊಲೆ ಮಾಡಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿ ಅರುಣ್ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments