ಬೈಕ್ ನಿಂದ ಪುಟಿದು ನದಿಗೆ ಬಿದ್ದ ಬಾಲಕಿ; ರಕ್ಷಣೆಗೆ ನದಿಗೆ ಹಾರಿದ ತಂದೆ ಸಾವು

Webdunia
ಬುಧವಾರ, 4 ಜುಲೈ 2018 (18:22 IST)
ಕೃಷ್ಣಾ ನದಿ ಸೇತುವೆ ಮೇಲೆ ಇಂದು ಮನಕಲುಕುವ ಘಟನೆ ನಡೆದಿದೆ. ಚಲಿಸುತ್ತಿದ್ದ ಬೈಕ್ ನಿಂದ ಪುಟಿದ ಮೂರು ವರ್ಷದ ಬಾಲಕಿ ನದಿಗೆ ಬಿದ್ದಿದ್ದಾಳೆ. ಮಗಳ ರಕ್ಷಣೆಗಾಗಿ ನದಿಗೆ ಹಾರಿದ ತಂದೆಯೂ ಪ್ರಾಣಬಿಟ್ಟಿದ್ದಾನೆ. 
 
ಬಾಗಲಕೋಟೆ ಜಿಲ್ಲೆಯ ಗಲಗಲಿ ಗ್ರಾಮದ ಸೇತುವೆ ಮೇಲೆ ಚಲಿಸುತ್ತಿದ್ದ ಬೈಕ್ ನಿಂದ ಪುಟಿದು ಮೂರು ವರ್ಷದ ಬಾಲಕಿ ನದಿಗೆ ಬಿದ್ದಿದ್ದಾಳೆ. ಆನಮ್(3) ಬಾಲಕಿಯನ್ನು ನದಿಗೆ ಹಾರಿದ ತಂದೆ ದಸ್ತಗೀರ್ ಗೌಂಡಿ (29) ಕೂಡ ನದಿಯಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾನೆ. ಕೃಷ್ಣಾ ನದಿ ಸೇತುವೆ ಮೇಲೆ ಈ ದುರ್ಘಟನೆ ನಡೆದಿದೆ.

ಬಾಲಕಿ ಆನಮ್ ಮೃತದೇಹ ಪತ್ತೆಯಾಗಿದ್ದು, ದಸ್ತಗೀರ್ ಗೌಂಡಿ ಶವಕ್ಕಾಗಿ ಹುಡುಕಾಟ ನಡೆದಿದೆ. ಮಗಳನ್ನು ರಕ್ಷಿಸಲು ನದಿಗೆ ಹಾರಿದ ತಂದೆಯೂ ಪ್ರಾಣ ಬಿಟ್ಟಿದ್ದಾನೆ. ಮೃತನ ಸಂಬಂಧಿಕರ ಆಕ್ರಂದನ ಮುಗಿಲು ಮುಗಿಲು ಮುಟ್ಟಿದೆ. ಬೀಳಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments