Select Your Language

Notifications

webdunia
webdunia
webdunia
webdunia

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಪ್ರಾಣ ಕಳೆದುಕೊಂಡ ಪದವೀಧರೆ

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಪ್ರಾಣ ಕಳೆದುಕೊಂಡ ಪದವೀಧರೆ
ಬೆಂಗಳೂರು , ಗುರುವಾರ, 27 ಜುಲೈ 2023 (09:16 IST)
ಬೆಂಗಳೂರು : ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕಬ್ಬನ್ ಪೇಟೆಯಲ್ಲಿ ನಡೆದಿದೆ.

ಐಶ್ವರ್ಯ (24) ಆತ್ಮಹತ್ಯೆಗೆ ಶರಣಾದ ವಿವಾಹಿತೆ. ಕಬ್ಬನ್ ಪೇಟೆಯ 2ನೇ ಮುಖ್ಯರಸ್ತೆಯಲ್ಲಿರುವ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವಿವಾಹಿತೆ ಬಿಇ ಪದವೀಧರೆಯಾಗಿದ್ದು, 2020ರಲ್ಲಿ ಆಕೆಯ ಪೋಷಕರು ಮಂಜುನಾಥ್ ಎಂಬಾತನೊಂದಿಗೆ ವಿವಾಹ ಮಾಡಿಕೊಟ್ಟಿದ್ದರು. 

ಮಂಜುನಾಥ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಐಶ್ವರ್ಯ ಕುಟುಂಬಸ್ಥರು ಮದುವೆ ಸಂದರ್ಭದಲ್ಲಿ 240 ಗ್ರಾಂ ಚಿನ್ನಾಭರಣ ಹಾಗೂ ಮೊದಲಿಗೆ 2 ಲಕ್ಷ ರೂ. ಹಣ ನೀಡಿದ್ದರು. ನಂತರ ವರದಕ್ಷಿಣೆಗಾಗಿ ಪೀಡಿಸಿದ ಕಾರಣ ಐಶ್ವರ್ಯ ಕುಟುಂಬಸ್ಥರು ಮತ್ತೆ 5 ಲಕ್ಷ ರೂ. ಹಣವನ್ನು ಕೊಟ್ಟಿದ್ದರು.

ಮೃತ ಐಶ್ವರ್ಯ ದಂಪತಿಗೆ ಒಂದೂವರೆ ವರ್ಷದ ಮುದ್ದಾದ ಮಗು ಇದೆ. ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಐಶ್ವರ್ಯ ಇಂದು ಕುಟುಂಬಸ್ಥರಿಗೆ ಡೆತ್ ನೋಟ್ ಬರೆದು ವಾಟ್ಸಪ್ ಮೂಲಕ ಕಳುಹಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಪ್ಯೂರ್ ವೆಜ್ ಎಂದಿದ್ದಕ್ಕೆ ಸುಧಾಮೂರ್ತಿಯನ್ನು ಟ್ರೋಲ್ ಮಾಡ್ತಿರೋದು ಸರೀನಾ?