ಚುನಾವಣೆಗೆ ಮುನ್ನ ಭರ್ಜರಿ ಕಾರ್ಯಾಚರಣೆ

Webdunia
ಬುಧವಾರ, 22 ಮಾರ್ಚ್ 2023 (14:51 IST)
ಗದಗ : ಚುನಾವಣೆ ಮುನ್ನವೇ ಜಿಲ್ಲೆಯ ಚೆಕ್ಪೋಸ್ಟ್ಗಳಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ, ತಂಬಾಕು ಸೇರಿದಂತೆ ಅನೇಕ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ.

ನಗರದ ಮುಳಗುಂದ ರಸ್ತೆಯಲ್ಲಿನ ಚೆಕ್ಪೋಸ್ಟ್ ತಪಾಸಣೆ ವೇಳೆ 15 ಲಕ್ಷ ರೂ. ಹಣ ಸಿಕ್ಕಿದೆ. ಹಾವೇರಿ ಜಿಲ್ಲೆ ಹುಲಗೂರನಿಂದ ಗದಗ ಮಾರ್ಗವಾಗಿ ದೇವದುರ್ಗಕ್ಕೆ ಹೊರಟಿದ್ದ ಕಾರಿನಲ್ಲಿ ದಾಖಲೆ ಇಲ್ಲದೇ ತೆಗೆದುಕೊಂಡು ಹೊರಟಿದ್ದ ಹಣ ವಶಕ್ಕೆ ಪಡೆದುಕೊಂಡಿದ್ದಾರೆ.

ಮುಂಡರಗಿ ಚೆಕ್ಪೋಸ್ಟ್ನಲ್ಲಿ ತಂಬಾಕು ಸೀಜ್ ಮಾಡಲಾಗಿದೆ. ಶಿವರಾಜ್ ನಾಗರಕಟ್ಟಿ ಎಂಬವರು ಬಿಲ್ ಇಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ 1 ಲಕ್ಷ 84 ಸಾವಿರ ರೂ. ಮೌಲ್ಯದ ತಂಬಾಕು ವಶಕ್ಕೆ ಪಡೆದುಕೊಳ್ಳಲಾಗಿದೆ. ಇದನ್ನು ಗದಗದಿಂದ ಮುಂಡರಗಿ ಮಾರ್ಗವಾಗಿ ಕೊಪ್ಪಳಕ್ಕೆ ರವಾನೆ ಮಾಡಲಾಗುತ್ತಿತ್ತು. 

ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಚೆಕ್ಪೋಸ್ಟ್ನಲ್ಲಿ ಸಹ ಆಟೋ ರಿಕ್ಷಾದಲ್ಲಿ ಸಾಗಿಸುತ್ತಿದ್ದ 1 ಲಕ್ಷ 10 ಸಾವಿರ ರೂ. ಮೌಲ್ಯದ ತಂಬಾಕು ಜಪ್ತಿ ಮಾಡಲಾಗಿದೆ. ಇದು ರಾಣೆಬೆನ್ನೂರಿನಿಂದ ಶಿರಹಟ್ಟಿಗೆ ಶ್ಯಾಮ ನವಲೆ ಎಂಬವರು ಸಾಗಿಸುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments