Webdunia - Bharat's app for daily news and videos

Install App

ಹೆರಿಗೆಗಾಗಿ ತವರು ಮನೆಗೆ ಬಂದ ಪತ್ನಿಯ ಶೀಲ ಶಂಕಿಸಿ ಕತ್ತು ಕೊಯ್ದು ಕೊಲೆ ಮಾಡಿದ ಪಾಪಿ ಪತಿ

Webdunia
ಭಾನುವಾರ, 30 ಸೆಪ್ಟಂಬರ್ 2018 (08:46 IST)
ಕೊಪ್ಪಳ : ಪತ್ನಿಯ ಶೀಲ ಶಂಕಿಸಿ ವ್ಯಕ್ತಿಯೊಬ್ಬ ಕುಡಗೋಲಿನಿಂದ  ಆಕೆಯ ಕುತ್ತಿಗೆ ಕತ್ತರಿಸಿ ಬರ್ಬರವಾಗಿ ಕೊಲೆ ಮಾಡಿದ ಅಮಾನವೀಯ ಘಟನೆ ಜಿಲ್ಲೆಯ ಕನಕಗಿರಿ ತಾಲೂಕಿನ ವಿಠಲಾಪುರದಲ್ಲಿ ನಡೆದಿದೆ.


ಯಮನಮ್ಮ(29)  ಕೊಲೆಯಾದ ದುರ್ದೈವಿ, ದುರಗಪ್ಪ ಕೊಲೆ ಮಾಡಿದ ಆರೋಪಿ. ಈ ದಂಪತಿಗೆ ಮದುವೆಯಾಗಿ 8 ವರ್ಷಗಳಾಗಿದ್ದು, ಮೂರು ಜನ ಮಕ್ಕಳಿದ್ದಾರೆ. ಗರ್ಭಿಣಿಯಾಗಿದ್ದ ಯಮನವ್ವ ಹೆರಿಗೆಗೆ ಅಂತಾ ವಿಠಲಾಪುರದ ತವರು ಮನೆಗೆ ಬಂದಿದ್ದರು. ಮೂರು ತಿಂಗಳ ಹಿಂದಷ್ಟೇ ಯಮನವ್ವ ಗಂಡು ಮಗುವಿಗೆ ಜನ್ಮ ನೀಡಿದ್ದರು.


ಗ್ರಾಮದಲ್ಲಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು  ಶಂಕಿಸಿ ವಿಠಲಾಪುರಕ್ಕೆ ಬಂದ ದುರುಗಪ್ಪ, ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಕಂಡು ಒಳಗೆ ಕರೆದುಕೊಂಡು ಹೋಗಿ ಕುಡಗೋಲಿನಿಂದ ಕುತ್ತು ಕೊಯ್ದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಕೊಲೆ ಬಳಿಕ ಅಲ್ಲಿಂದ ನೇರವಾಗಿ ಕನಕಗಿರಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಆರೋಪಿ ಪತಿ ದುರುಗಪ್ಪನನ್ನು ವಶಕ್ಕೆ ಪಡೆದಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ಮುಂದಿನ ಸುದ್ದಿ
Show comments