Webdunia - Bharat's app for daily news and videos

Install App

ಆಸ್ಪತ್ರೆಗೆ ದಾಖಲಾಗುವಷ್ಟು ಹೊಡೆದಾಡಿಕೊಂಡ ಜೂನಿಯರ್ ಕಾಲೇಜಿನ ಉಪನ್ಯಾಸಕರು

Sampriya
ಮಂಗಳವಾರ, 23 ಜುಲೈ 2024 (15:15 IST)
Photo Courtesy X
ಕೋಲಾರ: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಉಪನ್ಯಾಸಕರು ಆಸ್ಪತ್ರೆಗೆ ದಾಖಲಾಗುವಷ್ಟು ಹೊಡೆದಾಡಿಕೊಂಡ ಘಟನೆ ಇಂದು ನಡೆದಿದೆ. ಇಬ್ಬರು ಉಪನ್ಯಾಸಕರ ನಡುವೆ ಹೊಡೆದಾಟ ನಡೆದಿದ್ದು, ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ, ಹಾಲಿ ರಾಜ್ಯಶಾಸ್ತ್ರ ಉಪನ್ಯಾಸಕ ನಾಗಾನಂದ ಕೆಂಪರಾಜು ಮತ್ತು ಕನ್ನಡ ಉನ್ಯಾಸಕ ಜೆ.ಜಿ ನಾಗರಾಜ್ ನಡುವೆ ಶುರುವಾದ ಜಗಳ ಇಬ್ಬರು ಪೆಟ್ಟು ಆಗುವಷ್ಟು ಹೊಡೆದಾಡಿಕೊಂಡಿದ್ದಾರೆ. ಇನ್ನೂ ಘಟನೆಯಲ್ಲಿ ನಾಗರಾಜ್ ಅವರ ಮುಖಕ್ಕೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿದ ನಾಗರಾಜ್ ಅವರು, ನನ್ನ ಮೇಲೆ ಉಪನ್ಯಾಸಕ ನಾಗಾನಂದ ಕೆಂಪರಾಜು ಹಲ್ಲೆ ನಡೆಸಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸೋತಿರುವ ನಾಗಾನಂದ, ದಿನನಿತ್ಯ ನನಗೆ ಹಿಂಸೆ ಕೊಡುತ್ತಿದ್ದರು. ಅವಹೇಳನಾಕಾರಿಯಾಗಿ ನಿಂದಿಸುತ್ತಿದ್ದರು. ಅದನ್ನು ಪ್ರಶ್ನಿಸಿದ್ದಕ್ಕೆ, ಹಲ್ಲೆ ನಡೆಸಿದ್ದಾರೆ ಎಂದರು.

ಕೋಲಾರ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ ಇನ್ಸ್‌ಪೆಕ್ಟರ್ ಸದಾನಂದ ಅವರು ಆಸ್ಪತ್ರೆಗೆ ತೆರಳಿ, ಮಾಹಿತಿ ಪಡೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments