Webdunia - Bharat's app for daily news and videos

Install App

ಬೃಹತ್ ಗಾತ್ರದ ಗುಂಡಿ; ಅಧಿಕಾರಿಗಳ ನಿರ್ಲಕ್ಷ್ಯ

Webdunia
ಸೋಮವಾರ, 20 ನವೆಂಬರ್ 2023 (19:23 IST)
ಶಿವಮೊಗ್ಗದ ಸಾಗರ ನಗರ ವ್ಯಾಪ್ತಿಯಲ್ಲಿ ಕಳೆದ ವರ್ಷಗಳ ಹಿಂದೆ ಯುಜಿಡಿ ಕಾಮಗಾರಿ ನಡೆಸಲಾಗಿತ್ತು ಅದೇ ರೀತಿ 30ನೇ ವಾರ್ಡಿನಲ್ಲೂ ಕೂಡ ಯುಜಿಡಿ ಗುಂಡಿ ಕಾಮಗಾರಿ ನಡೆಸಲಾಗಿದ್ದು , ಈಗ ಯುಜಿಡಿ ಗುಂಡಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ಕಳೆದ 15 ದಿನಗಳ ಹಿಂದೆ ರಸ್ತೆಯ ಮಧ್ಯಭಾಗದಲ್ಲಿ ಇರುವ ಯುಜಿಡಿ ಗುಂಡಿಯ ಮುಚ್ಚಳ ಮುರಿದು ಹೋಗಿದ್ದು ಬೃಹತ್ ಗಾತ್ರದ ಗುಂಡಿ ಒಂದು ಬಿದ್ದಿದೆ , ಸ್ಥಳೀಯರು ತಕ್ಷಣ ಸ್ಥಳಿಯ ನಗರಸಭಾ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಹಲವು ಬಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು ಸಹ ಯಾವುದೇ ಪ್ರಯೋಜನ ಆಗದೆ ಇರುವ ಕಾರಣದಿಂದ ಸ್ಥಳೀಯರು ಗುಂಡಿಯ ಮೇಲೆ ತೆಂಗಿನ ಮರದ ತುಂಡು ಇಟ್ಟು ಅಧಿಕಾರಿಗಳ ವಿರುದ್ಧ ವಿಭಿನ್ನವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಗುಂಡಿಯ ಸುತ್ತಲೂ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು ಪುಟಾಣಿ ಮಕ್ಕಳಿಗೆ ಅಕ್ಕ ಪಕ್ಕದ ವೃದ್ಧರಿಗೆ ಸೊಳ್ಳೆಗಳ ಕಾಟ ಕೂಡ ಹೆಚ್ಚಾಗಿದೆ. ತಕ್ಷಣವೇ ಈ ಗುಂಡಿಯನ್ನು ಮುಚ್ಚದೆ ಹೋದಲ್ಲಿ, ಮುಂದಿನ ದಿನ ಈ ರಸ್ತೆಯಲ್ಲಿ ದೊಡ್ಡ ಅನಾಹುತ ಆಗುವುದು ಸುಳ್ಳಲ್ಲ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಇತ್ತ ಗಮನಹರಿಸಿ, ಆದಷ್ಟು ಬೇಗ ಸಮಸ್ಯೆಯನ್ನು ಸರಿಪಡಿಸದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಸ್ಥಳಿಯರು, ರಸ್ತೆ ತಡೆ ನಡೆಸಿ, ಪ್ರತಿಭಟಿಸುವ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments