Webdunia - Bharat's app for daily news and videos

Install App

ಬೃಹತ್ ಗಾತ್ರದ ಗುಂಡಿ; ಅಧಿಕಾರಿಗಳ ನಿರ್ಲಕ್ಷ್ಯ

Webdunia
ಸೋಮವಾರ, 20 ನವೆಂಬರ್ 2023 (19:23 IST)
ಶಿವಮೊಗ್ಗದ ಸಾಗರ ನಗರ ವ್ಯಾಪ್ತಿಯಲ್ಲಿ ಕಳೆದ ವರ್ಷಗಳ ಹಿಂದೆ ಯುಜಿಡಿ ಕಾಮಗಾರಿ ನಡೆಸಲಾಗಿತ್ತು ಅದೇ ರೀತಿ 30ನೇ ವಾರ್ಡಿನಲ್ಲೂ ಕೂಡ ಯುಜಿಡಿ ಗುಂಡಿ ಕಾಮಗಾರಿ ನಡೆಸಲಾಗಿದ್ದು , ಈಗ ಯುಜಿಡಿ ಗುಂಡಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ಕಳೆದ 15 ದಿನಗಳ ಹಿಂದೆ ರಸ್ತೆಯ ಮಧ್ಯಭಾಗದಲ್ಲಿ ಇರುವ ಯುಜಿಡಿ ಗುಂಡಿಯ ಮುಚ್ಚಳ ಮುರಿದು ಹೋಗಿದ್ದು ಬೃಹತ್ ಗಾತ್ರದ ಗುಂಡಿ ಒಂದು ಬಿದ್ದಿದೆ , ಸ್ಥಳೀಯರು ತಕ್ಷಣ ಸ್ಥಳಿಯ ನಗರಸಭಾ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಹಲವು ಬಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು ಸಹ ಯಾವುದೇ ಪ್ರಯೋಜನ ಆಗದೆ ಇರುವ ಕಾರಣದಿಂದ ಸ್ಥಳೀಯರು ಗುಂಡಿಯ ಮೇಲೆ ತೆಂಗಿನ ಮರದ ತುಂಡು ಇಟ್ಟು ಅಧಿಕಾರಿಗಳ ವಿರುದ್ಧ ವಿಭಿನ್ನವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಗುಂಡಿಯ ಸುತ್ತಲೂ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು ಪುಟಾಣಿ ಮಕ್ಕಳಿಗೆ ಅಕ್ಕ ಪಕ್ಕದ ವೃದ್ಧರಿಗೆ ಸೊಳ್ಳೆಗಳ ಕಾಟ ಕೂಡ ಹೆಚ್ಚಾಗಿದೆ. ತಕ್ಷಣವೇ ಈ ಗುಂಡಿಯನ್ನು ಮುಚ್ಚದೆ ಹೋದಲ್ಲಿ, ಮುಂದಿನ ದಿನ ಈ ರಸ್ತೆಯಲ್ಲಿ ದೊಡ್ಡ ಅನಾಹುತ ಆಗುವುದು ಸುಳ್ಳಲ್ಲ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಇತ್ತ ಗಮನಹರಿಸಿ, ಆದಷ್ಟು ಬೇಗ ಸಮಸ್ಯೆಯನ್ನು ಸರಿಪಡಿಸದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಸ್ಥಳಿಯರು, ರಸ್ತೆ ತಡೆ ನಡೆಸಿ, ಪ್ರತಿಭಟಿಸುವ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments