Webdunia - Bharat's app for daily news and videos

Install App

ಜಿಲ್ಲಾಧಿಕಾರಿ ಮನೆಯ ಹಿಂದೆ ಕಾಣಿಸಿಕೊಂಡ ಚಿರತೆ..!

Webdunia
ಶನಿವಾರ, 6 ಆಗಸ್ಟ್ 2022 (14:53 IST)
ಬೆಳಗಾವಿಯ ಜಿಲ್ಲಾಧಿಕಾರಿ ಅಧಿಕೃತ ನಿವಾಸದ ಹಿಂದಿರುವ ಕ್ವಾರ್ಟರ್ಸ್​ನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಎದುರಾಗಿದೆ. ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರಿಂದ ಶೋಧ ಕಾರ್ಯಾಚರಣೆ ಮುಂದುವರಿದಿದೆ.
 
ವಿಶ್ವೇಶ್ವರಯ್ಯ ನಗರದಲ್ಲಿ ನಿನ್ನೆ (ಆ.5) ಸಂಜೆ ಚಿರತೆ ಕಾಣಿಸಿಕೊಂಡಿತು. ಅಲ್ಲದೆ, ಜಾಧವ್​ ನಗರದಲ್ಲೂ ಪ್ರತ್ಯಕ್ಷವಾದ್ದರಿಂದ ಚಿರತೆ ಸೆರೆಗೆ ಅರಣ್ಯ ಇಲಾಖೆ ಎರಡೂ ಕಡೆ ಬೋನು ಅಳವಡಿಸಿದೆ. ಇದರ ಜೊತೆಗೆ ಮನೆಯಿಂದ ಯಾರು ಹೊರ ಬರದಂತೆ ಮೈಕ್ ನಲ್ಲಿ ಪೊಲೀಸರು ಘೋಷಣೆ ಕೂಗಿದ್ದಾರೆ.
 
ನಿನ್ನೆ ಮಧ್ಯಾಹ್ನ ಕಾಣಿಸಿಕೊಂಡ ಸ್ಥಳದಿಂದ ಒಂದು ಕಿಮೀ ದೂರದಲ್ಲಿ‌ ಮತ್ತೆ ಸಂಜೆ ಚಿರತೆ ಕಾಣಿಸಿಕೊಂಡಿದ್ದು, ಇದೀಗ ಎರಡು ಏರಿಯಾದ ಜನರಲ್ಲಿ ಆತಂಕ ಹುಟ್ಟಿಕೊಂಡಿದೆ. ಜಾಧವ್ ನಗರ, ಕ್ಯಾಂಪ್ ಪ್ರದೇಶ, ವಿಶ್ವೇಶ್ವರಯ್ಯ ನಗರ ಹಾಗೂ ಹನುಮಾನ್ ನಗರದ ಜನ ಹೊರ ಬಾರದಂತೆ ಎಚ್ಚರಿಕೆ ನೀಡಲಾಗಿದೆ.
 
ವಿಶೇಷವಾಗಿ ರಾತ್ರಿಯ ಸಮಯದಲ್ಲಿ ಯಾರು ಓಡಾಡದಂತೆ ನಗರ ಪೊಲೀಸ್ ಆಯುಕ್ತರಾದ ಡಾ.ಬೋರಲಿಂಗಯ್ಯ ಪ್ರಕಟಣೆ ಹೊರಡಿಸಿದ್ದಾರೆ. ಬೆಳಗಿನ ಜಾವ ವಾಯು ವಿಹಾರ ಮಾಡಬಾರದು‌ ಅಂತಾನೂ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments