Webdunia - Bharat's app for daily news and videos

Install App

ಏ. 3ಕ್ಕೆ 100 ‘ಕೈ’ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ?

Webdunia
ಶುಕ್ರವಾರ, 31 ಮಾರ್ಚ್ 2023 (17:40 IST)
ರಾಜ್ಯ ವಿಧಾನಸಭೆ ಚುನಾಣೆಗೆ ದಿನಾಂಕ ಘೋಷಣೆಯಾಗಿದ್ದು, ರಾಜ್ಯದಲ್ಲಿ ಚುನಾವಣ ತಯಾರಿ ಚಟುವಟಿಕೆ ಬಿರುಸು ಪಡೆದಿವೆ.. ಕಾಂಗ್ರೆಸ್​ ಈಗಾಗಲೇ ಟಿಕೆಟ್​​​​ ಮೊದಲ ಪಟ್ಟಿ ರಿಲೀಸ್ ಮಾಡಿದ್ದು, ಎರಡನೇ ಪಟ್ಟಿಗಾಗಿ ತಯಾರಿ ಮಾಡಿಕೊಂಡಿದೆ.. ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಕುದುರೆಗಾಗಿ ಹುಡುಕಾಟ ನಡೆಸಲಾಗಿದೆ. AICC ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಪಟ್ಟಿಯ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಏಪ್ರಿಲ್‌ 3ಕ್ಕೆ 100 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆಯಿದ್ದು, KPCC ಶಿಫಾರಸು ಪಟ್ಟಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಾ ಕಾದುನೋಡಬೇಕಿದೆ.. ಈಗಾಗಲೇ 50 ಅಭ್ಯರ್ಥಿಗಳ ಲಿಸ್ಟ್‌ ರೆಡಿಯಾಗಿದ್ದು, ಮುರ್ನಾಲ್ಕು ಹಂತಗಳಲ್ಲಿ ಪಟ್ಟಿ ರಿಲೀಸ್ ಮಾಡುವ ಚಿಂತನೆ ನಡೆಸಲಾಗಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. 3ನೇ ಹಂತದಲ್ಲಿ BJP, JDSನಿಂದ ಬರುವವರಿಗೆ ಮಣೆ ಹಾಕಲಾಗುತ್ತದೆ. ನಾಮಪತ್ರ ಪರಿಶೀಲನೆಯವರೆಗೆ ಕಾದು ನೋಡುವ ತಂತ್ರಕ್ಕೆ ಕಾಂಗ್ರೆಸ್​​ ಮುಂದಾಗುವ ಸಾಧ್ಯತೆಯನ್ನು ತಳ್ಳಿ ಹಾಕುವ ಸಾಧ್ಯತೆಯಿಲ್ಲ. ಜೆಡಿಎಸ್‌ಗೆ ರಾಜೀನಾಮೆ ನೀಡಿದ್ದ ಗುಬ್ಬಿ ಶಾಸಕ ಶ್ರೀನಿವಾಸ್‌ಗೆ ಟಿಕೆಟ್‌ ಫಿಕ್ಸ್ ಆಗಿದ್ದು, ಶಾಸಕ ಶಿವಲಿಂಗೇಗೌಡ, N.Y.ಗೋಪಾಲಕೃಷ್ಣ ಕೂಡ ಕಾಂಗ್ರೆಸ್​​​ ಪಡೆ ಸೇರುವ ಸಾಧ್ಯತೆಯಿದೆ.. ಜೊತೆಗೆ JDS, BJP ರೆಬೆಲ್‌ ನಾಯಕರು ಕಾಂಗ್ರೆಸ್‌ ಜೊತೆ ಸಂಪರ್ಕದಲ್ಲಿದ್ದಾರೆ ಎಂಬ ಆತಂಕ ಕಾಂಗ್ರೆಸ್​​, JDSನ ನಾಯಕರಿಗೆ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments