Select Your Language

Notifications

webdunia
webdunia
webdunia
webdunia

ಕಾರಿಗೆ ಲಾರಿ ಡಿಕ್ಕಿ; ಮೂವರ ಸಾವು

ಕಾರಿಗೆ ಲಾರಿ ಡಿಕ್ಕಿ; ಮೂವರ ಸಾವು
tumakuru , ಶನಿವಾರ, 20 ಆಗಸ್ಟ್ 2022 (21:06 IST)
ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರು ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಕಾರಿನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. 28 ವರ್ಷದ ಅವಿನಾಶ್, 5 ವರ್ಷದ ಪ್ರಣಂತಿ, 3 ವರ್ಷದ ಸೌಖ್ಯಾ ಮೃತ ದುರ್ದೈವಿಗಳಾಗಿದ್ದಾರೆ. ಮುಂದೆ ಚಲಿಸುತ್ತಿದ್ದ ಲಾರಿಗೆ ಸ್ವಿಫ್ಟ್ ಕಾರು ಡಿಕ್ಕಿಯಾಗಿದೆ. ಲಾರಿಗೆ ಸ್ವಿಫ್ಟ್ ಕಾರು ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಾಳು ಬಾಲಕಿಯನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಬಗ್ಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

8 ಅಂಗಡಿಗಳಿಗೆ ಕಳ್ಳರ ಗ್ಯಾಂಗ್​​ ಕನ್ನ