ಬೆಂಗಳೂರು: ಬಿಬಿಎಂಪಿ ಕಸದ ಲಾರಿಯಲ್ಲಿ ಪತ್ತೆಯಾದ ಶವದ ಪ್ರಕರಣ ಸಂಬಂಧ ಮೃತಳ ಗುರುತು ಪತ್ತೆಯಾಗಿದ್ದು, ಪ್ರಿಯಕರನೆ ಕೊಂದು ಕಸದ ಲಾರಿಗೆ ಹಾಕಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
ಮೃತಳನ್ನು ಬೆಂಗಳೂರಿನ ಹುಳಿಮಾವು ನಿವಾಸಿ ಆಶಾ ಎಂದು ತಿಳಿದುಬಂದಿದೆ. ಇನ್ನು ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ ಆಶಾಳನ್ನು ಆಕೆಯ ಪ್ರಿಯತಮ ಶಂಶುದ್ದೀನ್ ಕೊಲೆ ಮಾಡಿ ಶವವನ್ನು ಕಸದ ಲಾರಿಗೆ ಎಸಗಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಭಾನುವಾರ ಬಿಬಿಎಂಪಿ ಕಸದ ಲಾರಿಯಲ್ಲಿದ್ದ ಚೀಲದಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಮಹಿಳೆಯ ಕೈಗಳನ್ನು ಕಟ್ಟಿಹಾಕಲಾಗಿತ್ತು. ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿ, ತನಿಖೆ ಆರಂಭಿಸಿದ್ದರು.
ಸಾಕ್ಷ್ಯಗಳನ್ನು ಕಲೆಹಾಕಿದಾಗ ಆಶಾ ಜತೆಗಿದ್ದ ಅಸ್ಸಾಂ ಮೂಲದ 33ವರ್ಷದ ಮೊಹಮ್ಮದ್ ಶಂಶುದ್ದೀನ್ ಎಂಬಾತನೆ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಸದ್ಯ ಅತನನ್ನು ಬಂಧಿಸಿ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
ತನಿಖೆ ವೇಳೆ ಇಬ್ಬರಿಗೂ ಪ್ರತ್ಯೇಕ ಮದುವೆಯಾಗಿದೆ. ಆಶಾ ವಿಧವೆಯಾಗಿದ್ದು, ಆಕೆ ಹುಳಿಮಾವಿನಲ್ಲಿ ಬಾಡಿಗೆ ಮನೆಯಲ್ಲಿ ಶಂಶುದ್ದೀನ್ ಜತೆ ವಾಸಿಸುತ್ತಿದ್ದಳು. ಇವರಿಬ್ಬರು ಗಂಡ ಹೆಂಡತಿ ಎಂದು ಸ್ಥಳೀಯರು ಭಾವಿಸಿದ್ದರು.
ಇಬ್ಬರಿಗೂ ಬೇರೆ ಬೇರೆ ಮದುವೆಯಾಗಿದೆ. ಆಶಾ ವಿಧವೆಯಾಗಿದ್ದು, ಖಾಸಗಿ ಕಂಪನಿಯಲ್ಲಿ ಮನೆ ಕೆಲಸ ಮಾಡುತ್ತಿದ್ದರು. ಮೊಹಮ್ಮದ್ ಶಂಶುದ್ದೀನ್ ಕೂಡಾ ಮದುವೆಯಾಗಿದ್ದು, ಆತನ ಹೆಂಡತಿ ಮತ್ತು ಮಕ್ಕಳು ಅಸ್ಸಾಂನಲ್ಲಿ ವಾಸಿಸುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ