Select Your Language

Notifications

webdunia
webdunia
webdunia
webdunia

ಪತ್ನಿ, ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಪತ್ನಿ, ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಉಡುಪಿ , ಗುರುವಾರ, 28 ನವೆಂಬರ್ 2019 (10:44 IST)
ಉಡುಪಿ : ವ್ಯಕ್ತಿಯೊಬ್ಬ ಪತ್ನಿ, ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಗೋಳಿಯಂಗಡಿ ವ್ಯಾಪ್ತಿಯಲ್ಲಿ ನಡೆದಿದೆ.



ಮಾನಸಿ(40), ಸುಧೀಂದ್ರ (14), ಸುಧೀಶ್(8) ಮೃತಪಟ್ಟ ದುರ್ದೈವಿಗಳು, ಸೂರ್ಯನಾರಾಯಣ ಭಟ್(50) ಕೊಲೆ ಆತ್ಮಹತ್ಯೆ ಮಾಡಿಕೊಂಡಾತ. ಈತ ಪತ್ನಿ ಹಾಗೂ ಮಕ್ಕಳಿಗೆ ವಿಷ ಕೊಟ್ಟು ರಾಡ್ ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಬಳಿಕ ತಾನು ನೇಣು ಬಿಗಿದುಕೊಂಡು ಸಾವನಪ್ಪಿದ್ದಾನೆ.


ಮನೆಯಲ್ಲಿರುವ ಮೃತದೇಹಗಳನ್ನು ನೋಡಿ ಸೂರ್ಯನಾರಾಯಣನ ಸಹೋದರ ಶಂಕರನಾರಾಯಣ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕೌಟುಂಬಿಕ ಕಲಹದ ಹಿನ್ನಲೆ ಈ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅನುಮತಿ