Webdunia - Bharat's app for daily news and videos

Install App

ಶಿವನ ಪೂಜೆಗೆ ತೆರಳಿದ್ದ ವ್ಯಕ್ತಿ ಕಾಡಾನೆ ದಾಳಿಗೆ ಬಲಿ

Webdunia
ಬುಧವಾರ, 16 ಫೆಬ್ರವರಿ 2022 (19:42 IST)
ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಸಿದ್ದಾಪುರ ಸಮೀಪದ ಮಾಲ್ದಾರೆಯ ಗದ್ದಿಗೆ ಬೆಟ್ಟದಲ್ಲಿ ನಡೆದಿದೆ.
ಪಿರಿಯಾಪಟ್ಟಣ ತಾಲೂಕಿನ ನವಿಲೂರು ಕಂಡಿಬೆಟ್ಟ ಹಾಡಿಯ ನಿವಾಸಿ ಶಿವಣ್ಣ (50) ಎಂಬವರೇ ಮೃತ ದುರ್ದೈವಿ.
ಪ್ರತಿ ಸೋಮವಾರ ಮಾಲ್ದಾರೆಯ ಗದ್ದಿಗೆ ಬೆಟ್ಟದಲ್ಲಿರುವ ಸಿದ್ದೇಶ್ವರ ದೇವಾಲಯಕ್ಕೆ ಶಿವಣ್ಣ ಪೂಜೆಗೆಂದು ತೆರಳುತ್ತಿದ್ದರೆನ್ನಲಾಗಿದ್ದು, ಈ ಸಂದರ್ಭ ಕಾಡಾನೆ ದಾಳಿ ನಡೆಸಿದ ಪರಿಣಾಮ ಶಿವಣ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದೇವಾಲಯದ ಅರ್ಚಕ ಮಲ್ಲಿಕಾರ್ಜುನ ಎಂಬವರು ಪೂಜೆಗೆ ತೆರಳುವ ಸಂದರ್ಭ ಮೃತದೇಹ ಕಂಡು ಬಂದಿದ್ದು, ಕೂಡಲೇ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ವಲಯ ಅರಣ್ಯಾಧಿಕಾರಿ ಅನನ್ಯ ಕುಮಾರ್, ಉಪವಲಯ ಅರಣ್ಯಧಿಕಾರಿ ಚೇರನ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ವೆಂಕಟೇಶ್, ಸಿದ್ದಾಪುರ ಠಾಣಾಧಿಕಾರಿ ಮೋಹನ್ ರಾಜ್ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದರು.
ಮೃತದೇಹವನ್ನು ಪಿರಿಯಾಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments