ಟಿವಿ ರಿಪೋರ್ಟರ್ ಎಂದು ಸುಳ್ಳು ಹೇಳಿದ ವ್ಯಕ್ತಿ ಪೊಲೀಸ್ ವಶಕ್ಕೆ

Webdunia
ಶುಕ್ರವಾರ, 14 ಸೆಪ್ಟಂಬರ್ 2018 (18:38 IST)
ಟಿವಿ ವರದಿಗಾರ ಎಂದು ಹೇಳಿಕೊಂಡು ಓಡಾಡುತ್ತಿದ್ದ ಯುವಕನನ್ನುಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಖಾಸಗಿ ಚಾನೆಲ್ ವೊಂದರ  ವರದಿಗಾರನೆಂದು ಹೊನ್ನಾವರ ಪಟ್ಟಣದಲ್ಲಿ ಓಡಾಡಿಕೊಂಡಿದ್ದ ಅಂಕೋಲಾ ಮೂಲದ ಲೂಯಿಸ್ ಎನ್ನುವವನನ್ನು ಪೊಲೀಸರು ವಶಕ್ಕೆಪಡೆದಿದ್ದಾರೆ.
ಪಿಎಸ್ಐ ಸಂತೋಷ್ ಕಾಯ್ಕಿಣಿ ಅವರಿಗೆ ಕರೆ ಮಾಡಿದ್ದ ಲೂಯಿಸ್, ತನಗೂ ಹಾಗೂ ಇನ್ಯಾರದ್ದೋ ನಡುವೆ ಗಲಾಟೆ ನಡೆಯಲಿದೆ. ಕೂಡಲೇ ಸ್ಥಳಕ್ಕಾಗಮಿಸುವಂತೆ ಗೇರುಸೊಪ್ಪಾ ವೃತ್ತಕ್ಕೆ ಕರೆಯಿಸಿ ಕೊಂಡಿದ್ದ. ಈ ವೇಳೆ ಯುವತಿ ಯೊಬ್ಬಳ ಜತೆ ಇದ್ದಲೂಯಿಸ್, ಪೊಲೀಸರು ಬರುತ್ತಿದ್ದಂತೆ ಯಾರಿಗೋ ಕರೆಮಾಡಿ ಅಸಭ್ಯವಾಗಿ ಬೈದಾಡುತ್ತಿದ್ದ. ಈ ವೇಳೆ ಪೊಲೀಸರು ಬೈಕ್ ನ ದಾಖಲೆಗಳನ್ನು ಪರಿಶೀಲಿಸಿದಾಗ, ತಾನೊಬ್ಬ ಚಾನೆಲ್ ವರದಿಗಾರ. ನಾನು ಹೇಳಿದಂತೆ ನೀವು ನಡೆದುಕೊಳ್ಳಬೇಕು ಎಂದಿದ್ದಾನೆ. ಪೊಲೀಸರು ಈ ವೇಳೆ ಚಾನೆಲ್ ನ ಎಂಡಿಯವರೊಂದಿಗೆ ದೂರವಾಣಿ  ಕರೆಮಾಡಿ ಮಾತನಾಡಿದಾಗ ಈತ ವರದಿಗಾರ ಅಲ್ಲವೆಂಬುದು ತಿಳಿದು ಬಂದಿದೆ.

ಲೂಯಿಸ್ ನನ್ನು ವಶಕ್ಕೆ ಪಡೆದ ಪೊಲೀಸರು, ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಕುರಿತಾಗಿ ಪ್ರಕರಣ ದಾಖಲಿಸಿಕೊಂಡು ಬೈಕ್ ನ್ನು ಸೀಜ್ ಮಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments