Webdunia - Bharat's app for daily news and videos

Install App

ಅಣ್ಣನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಹಿಂತಿರುಗಿದ ತಮ್ಮ ಅಪಘಾತದಲ್ಲಿ ಸಾವು

Webdunia
ಶನಿವಾರ, 21 ನವೆಂಬರ್ 2015 (12:52 IST)
ತನ್ನ ಸೋದರನ ಅಂತ್ಯಕ್ರಿಯೆ ನಡೆಸಿ ಕಾರಿನಲ್ಲಿ ವಾಪಸಾಗುತ್ತಿದ್ದ ವ್ಯಕ್ತಿಯೊಬ್ಬರು ಕಾರು ಅಪಘಾತದಲ್ಲಿ ಮೃತಪಟ್ಟ ದುರಂತ ಗುರುವಾರ ಮುಂಜಾನೆ ಸಂಭವಿಸಿದೆ. ಹೆಮ್ಮಾಡಿಯ ರಘುಪತಿ ಪೂಜಾರಿ ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಅಂಗಡಿಯೊಂದನ್ನು ನಡೆಸುತ್ತಿದ್ದು,  ಅಂತ್ಯಕ್ರಿಯೆ ಮುಗಿಸಿಕೊಂಡು ಬೆಂಗಳೂರಿಗೆ ವಾಪಸಾಗುವಾಗ ವಿಧಿ ತನ್ನನ್ನು ಕೂಡ ಸೆಳೆಯುತ್ತದೆಂಬ ಕಲ್ಪನೆ ಅವರಿಗಿರಲಿಲ್ಲ. 
 
 ರಘುಪತಿ ಅವರ ಅಣ್ಣ ಶೀನಾ ಪೂಜಾರಿ ಸುದೀರ್ಘ ಕಾಯಿಲೆಯ ಬಳಿಕ ಹೆಮ್ಮಾಡಿಯಲ್ಲಿರುವ ಅವರ ನಿವಾಸದಲ್ಲಿ ಮೃತಪಟ್ಟಿದ್ದರು. ರಘುಪತಿ  ಪತ್ನಿ ಶಾರದಾ ಮತ್ತು ಇಬ್ಬರು ಪುತ್ರರೊಂದಿಗೆ ಅಣ್ಣನ ಅಂತ್ಯಕ್ರಿಯೆಗೆ ಹೆಮ್ಮಾಡಿಗೆ ಆಗಮಿಸಿದ್ದರು. ಅಂತ್ಯಕ್ರಿಯೆ ಮುಗಿಸಿಕೊಂಡು ಕುಟುಂಬವು ಬೆಂಗಳೂರಿನತ್ತ ಪ್ರಯಾಣ ಬೆಳೆಸಿತ್ತು. ಗುರುವಾರ ಮುಂಜಾನೆ 3.30ಕ್ಕೆ ಮಾಗಡಿ ಬಳಿ ಚಾಲಕನಿಗೆ ಕಾರಿನ ನಿಯಂತ್ರಣ ತಪ್ಪಿದ್ದರಿಂದ ತಲೆಕೆಳಗಾಗಿ ಉರುಳಿಕೊಂಡಿತು.

ಮುಂಭಾಗದ ಸೀಟಿನಲ್ಲಿದ್ದ ರಘುಪತಿ ತಲೆಗೆ ತೀವ್ರ ಗಾಯಗಳಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದು, ಚಾಲಕ, ರಘುಪತಿ ಪತ್ನಿ ಮತ್ತು ಮಕ್ಕಳು ಸಣ್ಣ ಗಾಯಗಳೊಂದಿಗೆ ಪಾರಾಗಿದ್ದಾರೆ.  ಕೇವಲ ಮೂರು ದಿನಗಳ ಅವಧಿಯಲ್ಲಿ ಇಬ್ಬರನ್ನು ಕಳೆದುಕೊಂಡ ಕುಟುಂಬ ತೀವ್ರ ಆಘಾತ ಅನುಭವಿಸಿದೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments