Webdunia - Bharat's app for daily news and videos

Install App

ಕಿರಿಕ್ ಮಾಡುತ್ತಿದ್ದ ವ್ಯಕ್ತಿಯೊಬ್ಬ ಜನನಿಬಿಡ ಪ್ರದೇಶದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ

Webdunia
ಮಂಗಳವಾರ, 28 ಫೆಬ್ರವರಿ 2023 (16:53 IST)
ಪ್ರತಿದಿನ ಕುಡಿದು ಬಂದು ಹೆಂಡತಿ ಜೊತೆ ಕಿರಿಕ್ ಮಾಡುತ್ತಿದ್ದ ವ್ಯಕ್ತಿಯೊಬ್ಬ ಜನನಿಬಿಡ ಪ್ರದೇಶದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ‌. 
 
ಚನ್ನಪಟ್ಟಣ ಮೂಲದ ಮಾದೇವ ಮೃತ ವ್ಯಕ್ತಿ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ಸ್ಥಳೀಯರು ಶವ ನೋಡಿ ಬೆಚ್ಚಿಬಿದ್ದು ಪೊಲೀಸರಿಗೆ ಮಾಹಿತಿ‌ ನೀಡಿದ್ದರು. ಮೃತ ಮಾದೇವ ಪ್ರತಿದಿನ ಕುಡಿದು ಹೆಂಡತಿ ಜೊತೆ ಜಗಳವಾಡಿ ಹಿಂಸೆ ನೀಡುತ್ತಿದ್ದ. ಈತನ ವರ್ತನೆಯಿಂದ ನೊಂದಿದ್ದ ಪತ್ನಿ ಅನೇಕ ಬಾರಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಳು. ಪೊಲೀಸರು ಹೆಂಡತಿ ಜೊತೆ ಕಿರಿಕ್ ಮಾಡಬೇಡ ಎಂದು ವಾರ್ನ್ ಮಾಡಿ ಕಳುಹಿಸಿದ್ದರು. ಈಗಾಗಲೇ ಮೂರು ಮದುವೆಯಾಗಿದ್ದ ಮಾದೇವ ಬುದ್ದಿ ಕಲಿಯದೆ,ನಿನ್ನೆ ಬೆಳಗ್ಗೆ ಹೆಂಡತಿ ಜೊತೆ ಜಗಳವಾಡಿ 150 ರೂಪಾಯಿ ಪಡೆದು ಕಂಠಪೂರ್ತಿ ಕುಡಿದು ಬಂದು ಮತ್ತೆ ಗಲಾಟೆ ಶುರುಮಾಡಿದ್ದ. ಈ ವಿಷಯವನ್ನು ಮಾದೇವನ ಪತ್ನಿ ಪೊಲೀಸರಿಗೆ ತಿಳಿಸಿದ್ದಳು. ಸ್ಥಳಕ್ಕೆ ಬಂದ ಪೊಲೀಸರು ಮನೆಗೆ ಬಂದು ಬುದ್ದಿ ಹೇಳಿದ್ದರಿಂದ ಮನನೊಂದ ಮಾದೇವ ಪಾಪರೆಡ್ಡಿಪಾಳ್ಯ ಸರ್ಕಲ್ ಬಳಿ ಬಂದು ಮರಕ್ಕೆ ನೇಣು ಬಿಗಿದುಕೊಂಡಿದ್ದಾನೆ‌. ಸದ್ಯ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments