Webdunia - Bharat's app for daily news and videos

Install App

ಕುತ್ತಿಗೆಗೆ ಹಾವು ಸುತ್ತಿಕೊಂಡ ವ್ಯಕ್ತಿ

Webdunia
ಶುಕ್ರವಾರ, 11 ನವೆಂಬರ್ 2022 (17:39 IST)
ಜಾರ್ಖಂಡ್​ನ ಖುರ್ದ್​ ಗ್ರಾಮದಲ್ಲಿ ವಯಸ್ಸಾದ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಹೆಬ್ಬಾವನ್ನೇ ಕತ್ತಿಗೆ ಸುತ್ತಿಕೊಂಡಿದ್ದಾನೆ. ಈ ವ್ಯಕ್ತಿಯನ್ನು ಬಿರ್ಜಲಾಲ್​ ರಾಮ್ ಭುಯಾನ್​ ಎಂದು ಗುರುತಿಸಲಾಗಿದೆ. ಕುಡಿದ ನಶೆಯಲ್ಲಿ ಈ ಹಾವು ವಸ್ತ್ರದಂತೆ ಕಂಡಿದೆಯೋ, ಹಾರದಂತೆ ಕಂಡಿದೆಯೋ ತಿಳಿಸಿಲ್ಲ. ಹಾವು ಈತನ ಕತ್ತನ್ನು ಸುತ್ತುವರಿದಿದೆ. ನಂತರ ಈತನಿಗೆ ಜ್ಞಾನೋದಯವಾಗಿದ್ದು, ಹಾವನ್ನು ಬಿಡಿಸಲು ಪ್ರಯತ್ನಿಸಿದ್ದಾನೆ. ಆದರೆ ಹಾವನ್ನು ಬಿಡಿಸಲು ಸಾಧ್ಯವಾಗಿಲ್ಲ. ನಂತರ ಅಲ್ಲೇ ಇದ್ದ ಕೆಲ ಮಂದಿ ಹಾವನ್ನು ಬಿಡಿಸಲು ಪ್ರಯತ್ನಿಸಿ, ನಂತರ ಯಶಸ್ವಿಯಾಗ್ತಾರೆ. ವ್ಯಕ್ತಿಯ ಸಹಾಯಕ್ಕೆ ಯಾರೂ ಬರದೇ ಇದ್ದಿದ್ದರೆ ವ್ಯಕ್ತಿ ಉಸಿರುಗಟ್ಟಿ ಸಾವನಪ್ಪುತ್ತಿದ್ದ. ಈ ವಿಡಿಯೋ ವೈರಲ್​ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments