Webdunia - Bharat's app for daily news and videos

Install App

ನ.೦೨ಕ್ಕೆ ಕೊಪ್ಪದಲ್ಲಿ ಕ್ಷೇತ್ರ ಮಟ್ಟದ ಅಡಿಕೆ ಬೆಳೆಗಾರರ ಸಭೆ

Webdunia
ಮಂಗಳವಾರ, 25 ಅಕ್ಟೋಬರ್ 2022 (20:40 IST)
ಅಡಿಕೆ ಬೆಳೆಗೆ ವ್ಯಾಪಕವಾಗಿ ಆವರಿಸುತ್ತಿರುವ ಎಲೆ ಚುಕ್ಕಿ ರೋಗ,ಹಳದಿ ಎಲೆ ರೋಗದಿಂದ ಬೆಳೆಗಾರರು ಕಂಗಾಲಾಗಿದ್ದಾರೆ.ಸಮಸ್ಯೆಗಳ ಕುರಿತು ಕ್ಷೇತ್ರದ ಅಡಿಕೆ ಬೆಳೆಗಾರರು  ಹೋರಾಟ ನಡೆಸುವ ಪೂರ್ವಭಾವಿಯಾಗಿ ಸಂಘಟನೆ ರಚಿಸಲು ಉದ್ದೇಶಿಸಲಾಗಿದೆ ಎಂದು ಅಡಿಕೆ ಬೆಳಗಾರ ತಲವಾನೆ ಪ್ರಕಾಶ್ ತಿಳಿಸಿದರು.
 
   ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಕ್ಷೇತ್ರ ಮಟ್ಟದ ಅಡಿಕೆ ಬೆಳೆಗಾರರ ಸಂಘಟನೆ ರಚನೆ  ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ೩೦ ವರ್ಷದಿಂದ   ಅಡಿಕೆಗೆ ಹಳದಿ ಎಲೆ ರೋಗ ಇನ್ನಿಲ್ಲದಂತೆ ಕಾಡಿದೆ.ಈ ನಡುವೆ ಎಲೆ ಚುಕ್ಕಿ ರೋಗ ಅಡಿಕೆಯನ್ನು ಇನ್ನಿಲ್ಲದಂತೆ ಆವರಿಸಿಕೊಂಡಿದ್ದು ಬೆಳೆಗಾರರು ಬೀದಿಗೆ ಬೀಳುವಂತಾಗಿದೆ. ಇದೂವರೆಗಿನ ಸಂಶೋಧನೆಗಳು ಯಾವುದೇ ಫಲ ನೀಡಿಲ್ಲದಿರುವುದು ವಿಷಾದನೀಯ. ಇಂತಹ ಸಂಕಷ್ಟದ ಸ್ಥಿತಿಯಲ್ಲಿ ಎಲ್ಲಾ ರೈತರು ಸಂಘಟಿತರಾಗಿ ಹೋರಾಟ ನಡೆಸಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದರು.
 
   ಬೆಳೆಗಾರ ಕುಕ್ಕೊಡಿಗೆ ರವೀಂದ್ರ ಮಾತನಾಡಿ, ಸಮಸ್ಯೆಗಳ ಕುರಿತು ಹೋರಾಟ ನಡೆಸಲು ಪಕ್ಷಾತೀತ ಸಂಘಟನೆಯೊಂದರ ಅವಶ್ಯಕತೆ ಇದೆ.ಇದು ಯಾರ ವಿರುದ್ದವೂ ಅಲ್ಲ.ಬೆಳೆಗಾರರು ಸಂಘಟಿತರಾಗಿ ನಮ್ಮ ಸ್ಪಷ್ಟ ಬೇಡಿಕೆಗಳನ್ನು ಸರ್ಕಾರದ ಮುಂದಿಡಬೇಕು.ಈ ನಿಟ್ಟಿನಲ್ಲಿ ಕೊಪ್ಪ,ನರಸಿಂಹರಾಜಪುರ,ಶೃಂಗೇರಿ ಒಳಗೊಂಡ ಮೂರು ತಾಲ್ಲೂಕಿನ ರೈತರ ಸಭೆಯನ್ನು ನ.೨ ರಂದು ಬೆಳಿಗ್ಗೆ ೧೦ ಗಂಟೆಗೆ ಕೊಪ್ಪದ ಟೌನ್ ಹಾಲ್ ನಲ್ಲಿ ಕರೆಯಲು ತೀರ್ಮಾನಿಸಲಾಗಿದೆ. ಎಲ್ಲಾ ಪಕ್ಷದ ಮುಖಂಡರು, ಬೆಳೆಗಾರರು, ಸಂಘಟಕರು ಆಗಮಿಸಿ ಸಲಹೆ ಸೂಚನೆ ನೀಡುವಂತೆ ಕೋರಿದರು.
 
      ಕೊಪ್ಪದ ಲೆಕ್ಕಪರಿಶೋಧಕ ಹರ್ಷ, ಬಿಳಾಲುಕೊಪ್ಪ ಭಾಸ್ಕರ್ ರಾವ್, ಅಲಗೇಶ್ವರ ಸಚಿನ್, ನಾರಾಯಣ ಬೆಂಡೆಹಕ್ಲು, ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎಂ.ಸತೀಶ್, ಅರುಣ್ ಹೊಸೂರು, ಸುಹಾಸ್ ಹುಲ್ಸೆ, ದಿವಾಕರ ಹೆಗ್ಗದ್ದೆ ಇದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡು, ತಂದೆ ಮಗನ ಜಗಳವನ್ನು ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡ ಸಬ್‌ ಇನ್‌ಸ್ಪೆಕ್ಟರ್‌

ಕೆಆರ್ ಎಸ್ ಡ್ಯಾಮ್ ಕಟ್ಟುವ ಯೋಜನೆ ಟಿಪ್ಪುಗಿತ್ತು ಎಂದ ಜಮೀರ್ ಅಹ್ಮದ್ ಗೆ ಟಾಂಗ್ ಕೊಟ್ಟ ಬಿಜೆಪಿ

ಮುಂಬೈ, ಶಸ್ತ್ರಚಿಕಿತ್ಸೆ ಬೆನ್ನಲ್ಲೇ ಐವರಿಗೆ ಕಣ್ಣಿನ ಸೋಂಕು: ವೈದ್ಯರ ವಿರುದ್ಧ ಎಫ್‌ಐಆರ್‌

ಪ್ರಜ್ವಲ್ ಥರಾ ಪ್ರತಾಪ್ ಸಿಂಹ ಮೊಬೈಲ್ ನೋಡಿದ್ರೆ ಜೈಲಿಗೇ ಹಾಕ್ಬೇಕಾಗುತ್ತೆ: ಎಂ ಲಕ್ಷ್ಮಣ

ಮದರಸಾ ಗುರುಗಳಿಗೆ ಕನ್ನಡ, ಅಲ್ಪಸಂಖ್ಯಾತರ ಸಾಮೂಹಿಕ ಮದುವೆಗೆ 50000 ಕೊಡ್ತೇವೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments