Select Your Language

Notifications

webdunia
webdunia
webdunia
webdunia

ಭಾರತ ಬಂದ್ ಗೆ ಗುಮ್ಮಟ ನಗರಿಯಲ್ಲಿ ಮಿಶ್ರ ಪ್ರತಿಕ್ರಿಯೆ

ಭಾರತ ಬಂದ್ ಗೆ ಗುಮ್ಮಟ ನಗರಿಯಲ್ಲಿ ಮಿಶ್ರ ಪ್ರತಿಕ್ರಿಯೆ
ವಿಜಯಪುರ , ಬುಧವಾರ, 9 ಜನವರಿ 2019 (19:52 IST)
ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್ ಗೆ ಗುಮ್ಮಟ ನಗರಿ ಖ್ಯಾತಿಯ ವಿಜಯಪುರ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಸವನಬಾಗೇವಾಡಿ, ಮುದ್ದೇಬಿಹಾಳ, ವಿಜಯಪುರ, ಇಂಡಿ ಗಳಲ್ಲಿಯೂ ಸಹ ಮಿಶ್ರ ಪ್ರತಿಕ್ರಿಯೆ ಕಂಡು ಬಂದಿತು.  

ಬಂದ್ ನಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಸಾರಿಗೆ ಸಂಚಾರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಹಾಗೂ ಇನ್ನಿತರ ಸೇವೆಗಳ ಮೇಲೆ ಸ್ವಲ್ಪ ಮಟ್ಟಿಗೆ ಪರಿಣಾಮ ಬೀರಿದೆ.

ಆದರೆ ಪಟ್ಟಣದಲ್ಲಿ ಜನಜೀವನ ಎಂದಿನಂತೆ ಸಾಗಿದ್ದು ಯಾವುದೇ ಪರಿಣಾಮ ಬೀರಿಲ್ಲ. ಬಸ್ ಸಂಚಾರ ಬೆಳಗ್ಗೆಯಿಂದ ಬಂದ್ ಆಗಿತ್ತು ಪರಿಣಾಮ ಶಾಲೆ ವಿದ್ಯಾರ್ಥಿಗಳಿಗೆ ಬಹಳ ತೊಂದರೆ ಆದರೂ ಸಂಜೆವೇಳೆಗೆ ಸಂಚಾರ ಪುನಾರಂಭಗೊಂಡಿತು. ಶಾಲಾ ಕಾಲೇಜು ರಜೆ ಘೋಷಿಸದ ಕಾರಣ ಅಲ್ಲಲ್ಲಿ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಬಂದು ಹೋಗುವ ದೃಶ್ಯ ಕಾಣುತ್ತಿತ್ತು.




Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದಗಂಗಾ ಆಸ್ಪತ್ರೆಗೆ ಭೇಟಿ ನೀಡಿದ ಕಾಶಿ ಜಗದ್ಗುರು