Publish Date: Wed, 21 Aug 2019 (16:00 IST)
Updated Date: Wed, 21 Aug 2019 (16:02 IST)
ಇನ್ನೂ ಬಾಳಿ ಬದುಕಬೇಕಿದ್ದ ಮೂರು ಮಕ್ಕಳೊಂದಿಗೆ ಹೆತ್ತ ತಾಯಿಯೇ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರೋ ಹೃದಯ ವಿದ್ರಾವಕ ಘಟನೆ ನಡೆದಿದೆ.
ಘಟನೆಯಲ್ಲಿ ಮೂರು ಮಕ್ಕಳೂ ಸೇರಿದಂತೆ ತಾಯಿ ಸಾವನ್ನಪ್ಪಿದ್ದಾರೆ. ಪತಿ ಮನೆಯವರ ವಿರುದ್ಧ ಪ್ರಕರಣ ದಾಖಲಾಗಿದೆ.
ಕ್ಷುಲ್ಲಕ ಕಾರಣ ಗಂಡನ ಮನೆಯವರ ದೌರ್ಜನ್ಯದಿಂದ ಬೇಸತ್ತ ಮಹಿಳೆ ತನ್ನ ಮೂರು ಪುಟ್ಟಮಕ್ಕಳೊಂದಿಗೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ರಾಯಚೂರಿನ ನಾರಾಯಣಪುರ ಬಲದಂಡೆ ಮುಖ್ಯ ನಾಲೆಯಲ್ಲಿ ನಾಲ್ವರ ಶವಗಳು ಸಿಕ್ಕಿವೆ. ಮಹ್ಮದ್ ಹನೀಫ್ (5), ಐಯಾನ್(3) ಮತ್ತು ರಿಗಾನ್(1) ಮೃತಪಟ್ಟ ಮಕ್ಕಳಾಗಿದ್ದರೆ, ನಸೀಮಾ(28) ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಮಹಿಳೆ.
ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಮಹಿಳೆಯ ಪತಿಯ ಕುಟುಂಬದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.