Select Your Language

Notifications

webdunia
webdunia
webdunia
webdunia

ಚಿಕ್ಕ ಕಂದಮ್ಮನ ಎದುರೇ ಆತ್ಯಹತ್ಯೆ ಮಾಡಿಕೊಂಡ ತಾಯಿ!

ಚಿಕ್ಕ ಕಂದಮ್ಮನ ಎದುರೇ ಆತ್ಯಹತ್ಯೆ ಮಾಡಿಕೊಂಡ ತಾಯಿ!
ಮಂಡ್ಯ , ಗುರುವಾರ, 2 ಜೂನ್ 2022 (14:23 IST)
ಮಂಡ್ಯ : ತನ್ನ ಪುಟ್ಟ ಕಂದಮ್ಮನ ಎದುರೇ ತಾಯಿ ನೇಣಿಗೆ ಶರಣಾಗಿರುವ ಮನಕಲಕುವ ಘಟನೆ ಮಂಡ್ಯದಲ್ಲಿ ಜರುಗಿದೆ.

ಕೆಂಪೇಗೌಡ ಬಡಾವಣೆಯಲ್ಲಿ ವಾಸವಿದ್ದ ರವಿಶಂಕರ್ ಪತ್ನಿ ಕವಿತಾ ತನ್ನ ಒಂದು ವರ್ಷದ ಮಗುವಿನ ಮುಂದೆಯೇ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತಾಯಿಯನ್ನು ನೋಡಿದ ಒಂದು ವರ್ಷದ ಎಳೆಯ ಕಂದಮ್ಮ ಅಮ್ಮ, ಅಮ್ಮ ಎಂದು ಸುಮಾರು ಎರಡೂವರೆ ಗಂಟೆಗಳ ಕಾಲ ಮಮ್ಮಲ ಮರುಗಿದೆ. 

ಮಗುವಿನ ಆಕ್ರಂದನ ಕೇಳಿ ಅಕ್ಕ-ಪಕ್ಕದ ಮನೆಯವರು ಕಿಟಕಿಯಿಂದ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಒಂದು ಕಡೆ ಕವಿತಾ ನೇಣು ಬಿಗಿದುಕೊಂಡಿದ್ದು, ಮತ್ತೊಂದು ಕಡೆ ಪುಟ್ಟ ಕಂದಮ್ಮ ಗೋಳಾಡುವ ದೃಶ್ಯ ಕಂಡುಬಂದಿದೆ. ನಂತರ ಕವಿತಾ ಪತಿ ರವಿಶಂಕರ್ ಮತ್ತು ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.  

Share this Story:

Follow Webdunia kannada

ಮುಂದಿನ ಸುದ್ದಿ

ಹೆಂಡತಿ ಮನೆಗೆ ಬಂದ ವ್ಯಕ್ತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ!