ಕೋಟ್ಯಂತರ ಮೌಲ್ಯದ ಶೂ ಬೆಂಕಿಗಾಹುತಿ

Webdunia
ಮಂಗಳವಾರ, 19 ಸೆಪ್ಟಂಬರ್ 2023 (19:22 IST)
ಬೆಂಗಳೂರು ಹೊರ ವಲಯದಲ್ಲಿರುವ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ಶೂ, ಚಪ್ಪಲಿ ಗೋಡೌನ್​ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಐದು ಕೋಟಿಗೂ ಅಧಿಕ ಮೌಲ್ಯದ ಶೂಗಳು ಹಾಗೂ ಚಪ್ಪಲಿಗಳು ಸುಟ್ಟು ಭಸ್ಮವಾಗಿವೆ. ಗೋಡೌನ್​ ಬಳಿಯ ವಿದ್ಯುತ್ ಕಂಬಕ್ಕೆ ಕ್ಯಾಂಟರ್​ ಡಿಕ್ಕಿ ಹೊಡೆದಿದೆ. ಈ ವೇಳೆ ಉತ್ತರಹಳ್ಳಿ ನಿವಾಸಿ ಶ್ರೀನಿವಾಸ್ ಎಂಬುವವರಿಗೆ ಸೇರಿದ ASR MARKETING ಮತ್ತು UNICORN MARKETING ಎಂಬ ಹೆಸರಿನ ಗೋಡೌನ್​​ಗೆ ಸಂಪರ್ಕಿಸಿದ್ದ ವಿದ್ಯುತ್ ​​​ತಂತಿಯಿಂದ ಶಾರ್ಟ್​ಸರ್ಕ್ಯೂಟ್ ಉಂಟಾಗಿ ಈ ಅವಘಡ ಸಂಭವಿಸಿದೆ. ಗೋಡೌನ್​ನಲ್ಲಿ 100ಕ್ಕೂ ಹೆಚ್ಚು ಜನ ಕೆಲಸ ಮಾಡುತ್ತಿದ್ದರು. ಆದರೆ ಅಗ್ನಿ ಅವಘಡದಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ 7ಕ್ಕೂ ಹೆಚ್ಚು ಅಗ್ನಿಶಾಮಕ ದಳ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಗೋಡೌನ್ ಸ್ಥಿತಿ ಕಂಡು ಮಾಲೀಕ ಶ್ರೀನಿವಾಸ್ ಕಣ್ಣೀರು ಹಾಕಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಕೆಂಗೇರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಬಿಬಿಎಸ್ ಸೀಟಿಗಾಗಿ ತನ್ನ ಕಾಲನ್ನು ತಾನೇ ಕಟ್ ಮಾಡಿಕೊಂಡ ವ್ಯಕ್ತಿ

ದುನಿಯಾ ವಿಜಯ್ ಲ್ಯಾಂಡ್‌ ಲಾರ್ಡ್ ಸಿನಿಮಾ ನೋಡುತ್ತೇನೆಂದ ಸಿಎಂ ಸಿದ್ದರಾಮಯ್ಯ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ರಾಜಸ್ಥಾನದಲ್ಲಿ ತೀವ್ರಗೊಂಡ ಶೀತಗಾಳಿ, ಮನೆಯಿಂದ ಹೊರಬರಲು ಜನತೆ ಹಿಂದೇಟು

ಮುಂದಿನ ಸುದ್ದಿ
Show comments