Webdunia - Bharat's app for daily news and videos

Install App

ಹಸಿವಿನಿಂದ ಮೂಕಪ್ರಾಣಿಯ ರೋಧನೆ ರೋದನೆ

Webdunia
ಗುರುವಾರ, 10 ನವೆಂಬರ್ 2022 (14:13 IST)
ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಡಾನೆಗಳು ಆಹಾರ, ಆಸರೆ ಅರಸಿ ನಾಡಿಗೆ ಬರುತ್ತಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮನು ಎಂಬಾತ ಕಾಡಾನೆ ತುಳಿತಕ್ಕೆ ಬಲಿಯಾಗಿದ್ದ. ಈ ಘಟನೆಯಿಂದಾಗಿ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಇದೇ ಗ್ರಾಮದ ಲೋಕೇಶ್​​ ಎನ್ನುವವರ ಮನೆ ಮುಂದೆ ಮತ್ತೆ ಕಾಡಾನೆ ಕಾಣಿಸಿಕೊಂಡಿದೆ. ಆಹಾರ ಕೊಡಿ ಎನ್ನುವಂತೆ ಮನೆಯ ಮುಂದೆಯೇ ಆನೆ ಸಂಚಾರ ನಡೆಸಿದೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಆಹಾರಕ್ಕಾಗಿ ಮನೆ ಹಿಂದೆ-ಮುಂದೆ ಓಡಾಟ ನಡೆಸಿದೆ. ಕಾಡಾನೆಗಳ ಭಯದಲ್ಲಿದ್ದ ಜನ ಆಹಾರ ನೀಡಲು ಹಿಂದೇಟು ಹಾಕಿದ್ದಾರೆ. ಕೆಲಹೊತ್ತು ಅಲ್ಲೆ ಅಡ್ಡಾಡಿದ ಆನೆ ನಂತರ ವಾಪಸ್​​​ ತೆರಳಿದೆ. ಆಹಾರಕ್ಕಾಗಿ ಆನೆ ಅಂಗಲಾಚುತ್ತಿರುವ ದೃಶ್ಯ ಕಂಡು ಅಯ್ಯೋ ಎನಿಸುತ್ತಿದೆ. ಕಾಡಿನೊಳಗೆ ಆಹಾರ ಸಿಗದೇ ಕಾಡುಪ್ರಾಣಿಗಳು ನಾಡಿಗೆ ಬರುತ್ತಿವೆ.  ಅರಣ್ಯಾಧಿಕಾರಿಗಳ ನಿರ್ಲಕ್ಷವೇ ಇದಕ್ಕೆ ಕಾರಣ ಎಂದು ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments