ಬೆಂಗಳೂರಿನ ವಾಹನ ದಟ್ಟಣೆ ಸಮಸ್ಯೆ ಪರಿಹರಿಸಲು ಹೊಸ ಅಸ್ತ್ರಂ ತಂತ್ರಜ್ಞಾನ

geetha
ಶನಿವಾರ, 13 ಜನವರಿ 2024 (17:00 IST)
ಬೆಂಗಳೂರು  :ವಾಹನ ದಟ್ಟಣೆಯ ಬಗ್ಗೆ ನಿಖರವಾದ ಮಾಹಿತಿ ನೈಜ ಸಮಯದಲ್ಲಿ ದೊರೆಯಲಿದ್ದು, ಜೊತೆಗೆ ಅಪಘಾತ, ಮೆರವಣಿಗೆ ಅಥವಾ ಸಮಾರಂಭಗಳಿಂದ ಉಂಟಾಗಿರುವ ವಾಹನ ದಟ್ಟಣೆಯ ಬಗ್ಗೆಯೂ ಮಾಹಿತಿ ದೊರೆಯಲಿದೆ. ಯಾವ ಸಮಯದಲ್ಲಿ ಯಾವ ಪ್ರದೇಶದಲ್ಲಿ ಅತಿ ಹೆಚ್ಚು ವಾಹನ ದಟ್ಟಣೆ ಉಂಟಾಗುತ್ತಿದೆ ಎಂಬ ಬಗ್ಗೆ ಆಯಾ ಸಂಚಾರ ಪೊಲೀಸ್‌ ಠಾಣೆಯ ಅಧಿಕಾರಿಗೆ ಪ್ರತಿ 15 ನಿಮಿಷಕ್ಕೊಮ್ಮೆ ಮೊಬೈಲ್‌ ಗೆ ಸಂದೇಶ ಬರಲಿದೆ. ಜೊತೆಗೆ,  ವಾಹನ ದಟ್ಟಣೆಯ ತೀವ್ರತೆ, ವಾಹನಗಳ ಸಂಖ್ಯೆಯ ಬಗ್ಗೆಯೂ ಮಾಹಿತಿ ದೊರಕಲಿದೆ. 

ಆಂಬುಲೆನ್ಸ್‌ ಗಳ ಸುಗಮ ಸಂಚಾರಕ್ಕೂ ಸಹ ಅಸ್ತ್ರಂ ತಂತ್ರಜ್ಞಾನ ಸಹಾಯ ಮಾಡಲಿದ್ದು, ಒಂದು ವೇಳೆ ಆಂಬುಲೆನ್ಸ್‌ ಯಾವುದಾದರೂ ಟ್ರಾಫಿಕ್‌ ನಲ್ಲಿ 2 ನಿಮಿಷಕ್ಕೂ ಹೆಚ್ಚು ಕಾಲ ಸಿಲುಕಿಕೊಂಡಲ್ಲಿ ಆಪ್‌ ಮೂಲಕ ಎಸ್‌ಒಎಸ್‌ ಬಟನ್‌ ಆಕ್ಟಿವೇಟ್‌ ಆಗಲಿದೆ. ಇದರಿಂದ ಆ ಸ್ಥಳದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಅನುಕೂಲವಾಗಲಿದೆ. ಸಂಚಾರ ನಿರ್ವಹಣೆಗಾಗಿ 10 ಡ್ರೋಣ್‌ ಕೆಮೆರಾಗಳನ್ನೂ ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಬೆಳಗ್ಗೆ ಹಾಗೂ ಸಂಜೆ ಪೀಕ್‌ ಅವರ್‌ ಸಮಯದಲ್ಲಿ ಸಂಚಾರದ ದಟ್ಟಣೆಯನ್ನು ನೇರಪ್ರಸಾರದಲ್ಲಿ ವೀಕ್ಷಿಸಬಹುದಾಗಿದೆ. 

ರಾಜಧಾನಿ ನಗರವಾದ ಬೆಂಗಳೂರಿನ ಪ್ರಮುಖ ಸಮಸ್ಯೆಯಾದ ವಾಹನ ದಟ್ಟಣೆಯನ್ನು  ಪರಿಹರಿಸಲು ಬೆಂಗಳೂರು ಸಂಚಾರಿ ಪೊಲೀಸರು ವಿನೂತನ ಕ್ರಮಕ್ಕೆ ಮುಂದಾಗಿದ್ದಾರೆ.  ಅಸ್ತ್ರಂ ಎಂಬ ತಂತ್ರಜ್ಞಾನವನ್ನು ಅವಿಷ್ಕರಿಸಲಾಗಿದ್ದು, ಇದರಿಂದ ಸುಗಮ ವಾಹನ ಸಂಚಾರ ಉಂಟಾಗಲಿದೆ ಎಂದು ಸಂಚಾರ ಪೊಲೀಸ್‌ ಇಲಾಖೆ ಹೇಳಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments