Select Your Language

Notifications

webdunia
webdunia
webdunia
webdunia

ಉಪಚುನಾವಣೆಯ ಫಲಿತಾಂಶದ ನಂತರ ರಾಜ್ಯದ ರಾಜಕೀಯದಲ್ಲಿ ಹೊಸ ನಾಟಕ ಶುರು- ಕುಮಾರಸ್ವಾಮಿ

ಉಪಚುನಾವಣೆಯ ಫಲಿತಾಂಶದ ನಂತರ ರಾಜ್ಯದ ರಾಜಕೀಯದಲ್ಲಿ ಹೊಸ ನಾಟಕ ಶುರು- ಕುಮಾರಸ್ವಾಮಿ
ಬೆಂಗಳೂರು , ಮಂಗಳವಾರ, 24 ಸೆಪ್ಟಂಬರ್ 2019 (11:03 IST)
ಮೈಸೂರು : ಉಪಚುನಾವಣೆಯ ಫಲಿತಾಂಶ ಬಂದ ನಂತರ ರಾಜ್ಯದ ರಾಜಕೀಯದಲ್ಲಿ ಹೊಸ ನಾಟಕಗಳು ಶುರುವಾಗಲಿವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.




ಮೈಸೂರಿನಲ್ಲಿ ಮೃತಪಟ್ಟ ಜೆಡಿಎಸ್ ಮುಖಂಡ ನಾರಾಯಣಗೌಡ ಅಂತಿಮ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೆರಡು ದಿನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡುತ್ತೇವೆ. ಈ ಚುನಾವಣೆ ಎಲ್ಲಾ ಪಕ್ಷಗಳಿಗೂ ಅಗ್ನಿ ಪರೀಕ್ಷೆ. ಚುನಾವಣೆ ನಡೆದೇ ನಡೆಯುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಹೇಳಿದ್ದಾರೆ.


ಈ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಜೆಡಿಎಸ್ ತನ್ನದೇ ಆದ ರಾಜಕೀಯ ತಂತ್ರಗಾರಿಕೆ ಮಾಡಿದೆ. ಚುನಾವಣೆ ಫಲಿತಾಂಶ ಬಂದ ನಂತರ ರಾಜ್ಯದ ರಾಜಕೀಯದಲ್ಲಿ ಹೊಸ ನಾಟಕಗಳು ಶುರುವಾಗಲಿದೆ ಎಂದು ತಿಳಿಸಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಮತ್ತೆ ಪ್ರಧಾನಿ ಮೋದಿ-ಡೊನಾಲ್ಡ್ ಟ್ರಂಪ್ ಭೇಟಿ