Webdunia - Bharat's app for daily news and videos

Install App

ಬಿಜೆಪಿ ಮುಖಂಡನ ಅಪಘಾತಕ್ಕೆ ಹೊಸ ಟ್ವಿಸ್ಟ್

Webdunia
ಭಾನುವಾರ, 31 ಮಾರ್ಚ್ 2019 (12:34 IST)
ವಾಹನ ಅಪಘಾತದಲ್ಲಿ ಬಿಜೆಪಿ ಮುಖಂಡ ಸಾವನ್ನಪ್ಪಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ಮಡಿಕೇರಿ ಬಳಿ ಅಪಘಾತ ನಡೆದಿತ್ತು. ಬಾಲಚಂದ್ರ ಕಳಗಿ ದುರ್ಮರಣಕ್ಕೀಡಾದ ಘಟನೆಗೆ ಟ್ವಿಸ್ಟ್ ದೊರೆತಿದ್ದು, ಇದೊಂದು ಸಹಜ ಅಪಘಾತ ಪ್ರಕರಣವಾಗಿರದೆ ಕೊಲೆಗೆ ನಡೆಸಿದ ಕೃತ್ಯ ಎಂದು ಪೊಲೀಸರು ತನಿಖೆಯಲ್ಲಿ ಕಂಡುಕೊಂಡಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಕಳಗಿ ಸಾವಿನ ಬೆನ್ನಿಗೆ ಇಂತಹ ಅನುಮಾನಗಳು ವ್ಯಕ್ತವಾಗಿತ್ತು. ಮರಳು ಸೇರಿದಂತೆ ಅಕ್ರಮ ವ್ಯವಹಾರಗಳಿಗೆ ಬಾಲಚಂದ್ರ ಕಳಗಿಯವರು ತಡೆಯಾಗುತ್ತಿದ್ದಾರೆಂದು ಅವರನ್ನು ಕೊಲೆ ನಡೆಸಿದ ಸಂಶಯವಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ದೂರಿತ್ತು. ಅಪಘಾತ ನಡೆದ ಸ್ಥಳ ಕಳಗಿಯವರು ಓಡಾಡುವ ರಸ್ತೆ ಅಲ್ಲದ್ದರಿಂದ ಮನೆಯವರಿಗೂ ಈ ಘಟನೆಯ ಬಗ್ಗೆ ಸಂಶಯ ಮೂಡಿ ಕಳಗಿಯವರ ಚಿಕ್ಕಪ್ಪ ಕೂಡಾ ಪೊಲೀಸ್ ಇಲಾಖೆಗೆ ದೂರು ನೀಡಿದ್ದರು. ಈ ದೂರಿನಲ್ಲಿ ಅವರು ಸಂಪಾಜೆಯ ದಂಪತಿಯ ಹೆಸರನ್ನು ಉಲ್ಲೇಖಿಸಿದ್ದರು. ಆದರೆ ಪೊಲೀಸ್ ತನಿಖೆಯ ವೇಳೆ ಘಟನೆಗೂ ಇವರಿಗೂ ಸಂಬಂಧವಿಲ್ಲವೆಂದು ಪೊಲೀಸರು ಕಂಡುಕೊಂಡಿದ್ದಾರೆಂದು ಮಾಹಿತಿ ಲಭ್ಯವಾಗಿದೆ.

ಮರಳು ಮಾಫಿಯಾ ಸೇರಿದಂತೆ ಅಕ್ರಮ ವ್ಯವಹಾರಗಳಿಗೆ ಸಂಬಂಧಿಸಿದ ವಿಚಾರದಲ್ಲಿ ಈ ಕೃತ್ಯ ನಡೆದಿದೆ ಎಂದು ಹೇಳಲಾಗಿದ್ದು, ಕೊಡಗು ಸಂಪಾಜೆ ಮತ್ತು ಕಲ್ಲುಗುಂಡಿಯ ವ್ಯಕ್ತಿಗಳಿಬ್ಬರು ಸೇರಿ ಲಾರಿ ಚಾಲಕನ ಮೂಲಕ ಈ ಕೃತ್ಯ ನಡೆಸಿರಬೇಕೆಂದು ಪೊಲೀಸರು ಅಂದಾಜಿಸಿದ್ದಾರೆ. ಶಂಕಿತ ಆರೋಪಿಗಳು ಈಗ ಪೊಲೀಸ್ ವಶದಲ್ಲಿದ್ದಾರೆಂದು ತಿಳಿದು ಬಂದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments