Webdunia - Bharat's app for daily news and videos

Install App

ಹುತಾತ್ಮರ ಕುಟುಂಬಕ್ಕೆ ವಿನೂತನ ದೇಣಿಗೆ ಸಂಗ್ರಹಿಸಿದ ಜೋಡಿ!

Webdunia
ಶುಕ್ರವಾರ, 22 ಫೆಬ್ರವರಿ 2019 (14:48 IST)
ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಯೋಧರಿಗೆ ದೇಶಾದ್ಯಂತ ಮೇಣದಬತ್ತಿ ಹಚ್ಚುವದು,  ದೀಪ ಬೆಳಗುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿರುವದನ್ನು ನಾವು ನೋಡಿದ್ದೇವೆ. ಆದ್ರೆ ಇಲ್ಲೊಂದು ಜೋಡಿ ವಿಭಿನ್ನವಾಗಿ ನಮನ ಸಲ್ಲಿಸಿದೆ.

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೊಂದು ನವಜೋಡಿ ಮಾತ್ರ ಭಿನ್ನವಾಗಿ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದೆ. ತಮ್ಮ ನಿಶ್ಚಿತಾರ್ಥ ಸಮಾರಂಭದಲ್ಲಿ ನೃತ್ಯ ಮಾಡುವ ಮೂಲಕ ವೀರಯೋಧರಿಗಾಗಿ ದೇಣಿಗೆ ಸಂಗ್ರಹ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಈ ಮೂಲಕ ಯೋಧರ ಕುಟುಂಬಕ್ಕೆ ಸಹಾಯ ಮಾಡುವ ಸೇವೆ ಮಾಡಲಾಗಿದೆ.

ಕೃಷ್ಣ ಇರಕಲ್ ಹಾಗೂ ಕೀರ್ತಿ ಇರಕಲ್ ನವಜೋಡಿಯೇ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ನೃತ್ಯ ಮಾಡಿ ದೇಣಿಗೆ ಸಂಗ್ರಹಿಸಿದರು. ತಮ್ಮ ನಿಶ್ಚಿತಾರ್ಥವನ್ನು ಹುತಾತ್ಮ ಯೋಧರಿಗೆ ಅರ್ಪಣೆ ಮಾಡಿದ ಅವರು, ನಿಶ್ಚಿತಾರ್ಥ ಕಾರ್ಯಕ್ರಮದ ವೇದಿಕೆಯಲ್ಲಿ ದೇಶಭಕ್ತಿ ಗೀತೆಗಳಿಗೆ ನೃತ್ಯ ಮಾಡಿ ಕಾರ್ಯಕ್ರಮಕ್ಕೆ ಬಂದವರಿಂದ ದೇಣಿಗೆ ಪಡೆದರು.‌ ಇದಕ್ಕೆ ಸಹಕರಿಸಿದ ಸಂಬಂಧಿಕರು ಖುಷಿಯಿಂದಲ್ಲೇ ದೇಣಿಗೆ ನೀಡಿದರು. ಒಟ್ಟಿನಲ್ಲಿ ಮದುವೆ, ನಿಶ್ಚಿತಾರ್ಥಕ್ಕೆ ಸಂಬಂಧಿಸಿದಂತೆ ಈಗಿನ ಯುವತಿ ಯುವಕರು ಹಲವಾರು ಕನಸುಗಳನ್ನು ಕಂಡಿರುತ್ತಾರೆ.

ಇಂತವರ ನಡುವೆ ಈ ನವಜೋಡಿ ಮಾತ್ರ ತಮ್ಮ ನಿಶ್ಚಿತಾರ್ಥವನ್ನು ಯೋಧರಿಗೆ ಅರ್ಪಣೆ ಮಾಡಿ ಅವರ ಕುಟುಂಬಕ್ಕಾಗಿ ಸಹಾಯವಾಗಲೆಂದು ನೃತ್ಯ ಮಾಡಿ ದೇಣಿಗೆ ಪಡೆಯುವ ಮೂಲಕ ಆಧುನಿಕ ಜಗತ್ತಿನಲ್ಲಿ ವಿಶಿಷ್ಟವಾಗಿ ನಿಂತು ಗಮನ ಸೆಳೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್‌ಸ್ಟಾಗ್ರಾಂನಲ್ಲಿ ವಿಚ್ಛೇಧನ ನೀಡಿ ಸುದ್ದಿಯಾಗಿದ್ದ ದುಬೈಗೆ ರಾಜಕುಮಾರಿಗೆ ಮತ್ತೇ ಮದುವೆ

ಧರ್ಮಸ್ಥಳ ಕೇಸ್ ಎಸ್‌ಐಟಿಗೆ ನೀಡಿದ ಹಿಂದಿನ ಉದ್ದೇಶ ಬಿಚ್ಚಿಟ್ಟ ಸಚಿವ ಎಂಬಿ ಪಾಟೀಲ್‌

ಭಾರತದ ವಾಯುಮಾಲಿನ್ಯದ ಬಗ್ಗೆ ಶಾಕಿಂಗ್ ವರದಿ, ಇಲ್ಲಿದೆ

ವೀರೇಂದ್ರ ಪಪ್ಪಿಗೆ ತಪ್ಪದ ಇಡಿ ಕಸ್ಟಡಿ: ಅಧಿಕಾರಿಗಳಿಗೆ ಹಲವು ಷರತ್ತು ವಿಧಿಸಿದ ಕೋರ್ಟ್‌

ಕೇರಳದಲ್ಲಿ ಮಿದುಳು ತಿನ್ನುವ ಅಮೀಬಾ ಪತ್ತೆ, ಇದುವರೆಗೆ 41 ಪ್ರಕರಣ ದಾಖಲು

ಮುಂದಿನ ಸುದ್ದಿ
Show comments