Webdunia - Bharat's app for daily news and videos

Install App

ಹುತಾತ್ಮರ ಕುಟುಂಬಕ್ಕೆ ವಿನೂತನ ದೇಣಿಗೆ ಸಂಗ್ರಹಿಸಿದ ಜೋಡಿ!

Webdunia
ಶುಕ್ರವಾರ, 22 ಫೆಬ್ರವರಿ 2019 (14:48 IST)
ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಯೋಧರಿಗೆ ದೇಶಾದ್ಯಂತ ಮೇಣದಬತ್ತಿ ಹಚ್ಚುವದು,  ದೀಪ ಬೆಳಗುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿರುವದನ್ನು ನಾವು ನೋಡಿದ್ದೇವೆ. ಆದ್ರೆ ಇಲ್ಲೊಂದು ಜೋಡಿ ವಿಭಿನ್ನವಾಗಿ ನಮನ ಸಲ್ಲಿಸಿದೆ.

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೊಂದು ನವಜೋಡಿ ಮಾತ್ರ ಭಿನ್ನವಾಗಿ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದೆ. ತಮ್ಮ ನಿಶ್ಚಿತಾರ್ಥ ಸಮಾರಂಭದಲ್ಲಿ ನೃತ್ಯ ಮಾಡುವ ಮೂಲಕ ವೀರಯೋಧರಿಗಾಗಿ ದೇಣಿಗೆ ಸಂಗ್ರಹ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಈ ಮೂಲಕ ಯೋಧರ ಕುಟುಂಬಕ್ಕೆ ಸಹಾಯ ಮಾಡುವ ಸೇವೆ ಮಾಡಲಾಗಿದೆ.

ಕೃಷ್ಣ ಇರಕಲ್ ಹಾಗೂ ಕೀರ್ತಿ ಇರಕಲ್ ನವಜೋಡಿಯೇ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ನೃತ್ಯ ಮಾಡಿ ದೇಣಿಗೆ ಸಂಗ್ರಹಿಸಿದರು. ತಮ್ಮ ನಿಶ್ಚಿತಾರ್ಥವನ್ನು ಹುತಾತ್ಮ ಯೋಧರಿಗೆ ಅರ್ಪಣೆ ಮಾಡಿದ ಅವರು, ನಿಶ್ಚಿತಾರ್ಥ ಕಾರ್ಯಕ್ರಮದ ವೇದಿಕೆಯಲ್ಲಿ ದೇಶಭಕ್ತಿ ಗೀತೆಗಳಿಗೆ ನೃತ್ಯ ಮಾಡಿ ಕಾರ್ಯಕ್ರಮಕ್ಕೆ ಬಂದವರಿಂದ ದೇಣಿಗೆ ಪಡೆದರು.‌ ಇದಕ್ಕೆ ಸಹಕರಿಸಿದ ಸಂಬಂಧಿಕರು ಖುಷಿಯಿಂದಲ್ಲೇ ದೇಣಿಗೆ ನೀಡಿದರು. ಒಟ್ಟಿನಲ್ಲಿ ಮದುವೆ, ನಿಶ್ಚಿತಾರ್ಥಕ್ಕೆ ಸಂಬಂಧಿಸಿದಂತೆ ಈಗಿನ ಯುವತಿ ಯುವಕರು ಹಲವಾರು ಕನಸುಗಳನ್ನು ಕಂಡಿರುತ್ತಾರೆ.

ಇಂತವರ ನಡುವೆ ಈ ನವಜೋಡಿ ಮಾತ್ರ ತಮ್ಮ ನಿಶ್ಚಿತಾರ್ಥವನ್ನು ಯೋಧರಿಗೆ ಅರ್ಪಣೆ ಮಾಡಿ ಅವರ ಕುಟುಂಬಕ್ಕಾಗಿ ಸಹಾಯವಾಗಲೆಂದು ನೃತ್ಯ ಮಾಡಿ ದೇಣಿಗೆ ಪಡೆಯುವ ಮೂಲಕ ಆಧುನಿಕ ಜಗತ್ತಿನಲ್ಲಿ ವಿಶಿಷ್ಟವಾಗಿ ನಿಂತು ಗಮನ ಸೆಳೆದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments