Webdunia - Bharat's app for daily news and videos

Install App

ಭಾರತದಲ್ಲಿ ಈಗಲೇ ಒಂದು ಪಾಕಿಸ್ತಾನ ನಿರ್ಮಾಣವಾಗಿದೆ: ಬಸನಗೌಡ ಪಾಟೀಲ್ ಆಕ್ರೋಶ

Sampriya
ಗುರುವಾರ, 7 ನವೆಂಬರ್ 2024 (15:07 IST)
ವಿಜಯಪುರ: ಭಾರತದಲ್ಲಿ ಈಗಲೇ ಒಂದು ಪಾಕಿಸ್ತಾನ ನಿರ್ಮಾಣವಾಗಿದ್ದು, ಭಾರತದ ವಕ್ಫ್ ಆಸ್ತಿ ಪಾಕಿಸ್ತಾನದಷ್ಟಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರಹಾಕಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲಾಯಕ್ ಕಾಂಗ್ರೆಸ್ ಮಾಡಿದ ಕಾನೂನಿನಿಂದ ಭಾರತದಲ್ಲಿ ಇನ್ನೊಂದು ಪಾಕಿಸ್ತಾನ ನಿರ್ಮಾಣ ಆಗಿದೆ. ದಿನದಿಂದ ದಿನಕ್ಕೆ ಆಸ್ತಿ ವಕ್ಫ್ ಪಾಲಾಗುತ್ತಿದೆ. ವಕ್ಫ್ ವಿರುದ್ಧ ದೊಡ್ಡ ಸಂಗ್ರಾಮ ಆಗಬೇಕಿದೆ. ದೆಹಲಿಯಲ್ಲಿ ಮೌಲ್ವಿ ಚಂದ್ರಬಾಬು ನಾಯ್ಡು, ನಿತೇಶ್‌ಗೆ ಧಮ್ಕಿ ಹಾಕಿದ್ದಾನೆ. ಬಿಲ್‌ಗೆ ಬೆಂಬಲ ನೀಡಿದರೆ 5 ಲಕ್ಷ ಜನ ಸೇರಿಸುತ್ತೇನೆ ಎಂದಿದ್ದಾನೆ ಎಂದು ಹೇಳಿದರು.

ಅಂದು ಕುಂಕುಮ ಹಚ್ಚಿಕೊಳ್ಳದ ಮುಖ್ಯಮಂತ್ರಿಗಳು ಈಗ ಕುಂಕುಮ ಹಚ್ಚಿಕೊಳ್ಳುತ್ತಿದ್ದಾನೆ. ಚಾಮುಂಡೇಶ್ವರಿ ಬಳಿ ಹೋಗಿ ಈಗ ಕುಂಕುಮ ಹಚ್ಚಿ ಎನ್ನುತ್ತಿದ್ದಾನೆ. ವಿಜಯಪುರದ ವಾಗ್ದೇವಿ ದೇಗುಲದ ಒಳಗೆ ಸಿಎಂ ಹೋಗಲಿಲ್ಲ. ವಾಗ್ದೇವಿ ಶಾಪದಿಂದಲೇ ಮುಡಾದಲ್ಲಿ ಸಿಎಂ ಸಿಕ್ಕಿಹಾಕಿಕೊಂಡಿದ್ದಾನೆ. ಆದರೆ ವಿಜಯಪುರದಲ್ಲಿ ಮತಾಂಧ ಮೌಲ್ವಿ ಮನೆಗೆ ಹಲ್ಲು ಕಿರಿಯುತ್ತಾ ಹೋಗುತ್ತಾನೆ ಎಂದು ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

ನಮ್ಮ ದೇಶವನ್ನು 2029ಕ್ಕೆ ಮುಸ್ಲಿಂ ರಾಷ್ಟ್ರ ಮಾಡಲು ಹೊರಟಿದ್ದಾರೆ. ಇದೀಗ ನಾವು ಎಚ್ಚೆತ್ತುಕೊಳ್ಳಬೇಕಿದೆ.  ನಾವು ಜಾತಿ ಎಂದು ಹೋದರೆ ಕಡಿದು ಹಾಕುತ್ತಾರೆ. ಬಾಂಗ್ಲಾದಲ್ಲಿ ಏನಾಗುತ್ತಿದೆ ಅದಕ್ಕೆ ನಾವು ಎಚ್ಚೆತ್ತುಕೊಳ್ಳಬೇಕಿದೆ. ಈಗ ಹೋರಾಟ ಶುರುವಾಗಿದೆ, ಮುಂದೆ ಹೋರಾಟ ದೊಡ್ಡದಾಗಬೇಕು ಎಂದರು.

ಕೈ ಶಾಸಕರೇ ಸಚಿವ ಜಮೀರ್ ಅಹ್ಮದ್ ನಡೆ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಜಮೀರ್ ಪ್ರವಾಸ ತಡೆಯಿರಿ ಎನ್ನುತ್ತಿದ್ದಾರೆ. ಜಮೀರ್ ನನಗೆ ನಿಮ್ಮ ಅಪ್ಪನ ಆಸ್ತಿಯಾ ಎಂದಿದ್ದ, ನಾ ಇದು ನಿಮ್ಮ ಅಪ್ಪಂದ ಎಂದು ಕೇಳಿದ್ದೆ. ಜಮೀರ್ ಅಶ್ವಮೇಧವನ್ನು ಕಲಬುರ್ಗಿ, ಬೀದರ್‌ನಲ್ಲಿ ಯಾರು ತಡೆಯಲಿಲ್ಲ. ನಾನು ಜಮೀರ್ ಅಶ್ವಮೇಧ ಕುದುರೆಯನ್ನ ವಿಜಯಪುರದಲ್ಲಿ ತಡೆದಿದ್ದೇನೆ ಎಂದು ಹರಿಹಾಯ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments