Select Your Language

Notifications

webdunia
webdunia
webdunia
webdunia

ವಿಡಿಯೋ ಮಾಡಿಟ್ಟು ವ್ಯಕ್ತಿ ಆತ್ಮಹತ್ಯೆ

ವಿಡಿಯೋ ಮಾಡಿಟ್ಟು ವ್ಯಕ್ತಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ , ಸೋಮವಾರ, 26 ಸೆಪ್ಟಂಬರ್ 2022 (21:03 IST)
ಚಿಕ್ಕಬಳ್ಳಾಪುರ ನಗರಸಭಾ ಸದಸ್ಯನ ಕಿರುಕುಳದಿಂದ ಮನನೊಂದು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ನಗರದ 15ನೇ ವಾರ್ಡ್​​​​ನಲ್ಲಿ ನಡೆದಿದೆ. 32 ವರ್ಷದ ಪ್ರಶಾಂತ್ ಹಾಗೂ ನಗರಸಭಾ ಸದಸ್ಯ ಅಂಬರೀಶ್ ಮಧ್ಯೆ ವಿವಾಹಿತ ಮಹಿಳೆಯ ಜೊತೆ ಅನೈತಿಕ ಸಂಬಂಧ ವಿಚಾರದಲ್ಲಿ ಮನಸ್ತಾಪವಿತ್ತು. ಇದರಿಂದ ಮನನೊಂದು ಪ್ರಶಾಂತ್ ತನ್ನ ಸಾವಿಗೆ ನಗರಸಭಾ ಸದಸ್ಯ ಅಂಬರೀಶ್ ಕಾರಣವೆಂದು ವಾಟ್ಸಪ್​​​ನಲ್ಲಿ ವಿಡಿಯೋ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ  ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ