ಕಾಳಿಂಗ ಸರ್ಪ ಕಚ್ಚಿ ವ್ಯಕ್ತಿ ಸಾವು

Webdunia
ಮಂಗಳವಾರ, 22 ಸೆಪ್ಟಂಬರ್ 2015 (17:33 IST)
ಕಾರ್ಕೋಟಿ ವಿಷವುಳ್ಳ ಕಾಳಿಂಗ ಸರ್ಪವೊಂದು ಕಚ್ಚಿದ ಪರಿಣಾಮ ನುರಿತ ಉರಗತಜ್ಞನೋರ್ವ ಆಸ್ಪತ್ರೆಗೆ ಸಾಗಿಸುತ್ತಿದ್ದ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಲ್ಕೋಡು ಗ್ರಾಮದಲ್ಲಿ ನಡೆದಿದೆ.
 
ಸಾವನ್ನಪ್ಪಿದ ವ್ಯಕ್ತಿಯನ್ನು ಪ್ರಫುಲ್ಲದಾಸ್ ಭಟ್(62) ಎಂದು ಹೇಳಲಾಗಿದ್ದು, ಇವರು ಉರಗತ್ಜ್ಞರಾಗಿದ್ದ ಕಾರಣ ಹಾವನ್ನು ಹಿಡಿಯುವ ಸಲುವಾಗಿಯೇ ಕರೆಸಲಾಗಿತ್ತು. ಸ್ಥಳಕ್ಕೆ ಆಗಮಿಸಿದ ಅವರು ಹಾವನ್ನು ಹಿಡಿಯುವಲ್ಲಿಯೂ ಕೂಡ ಯಶಸ್ವಿಯಾದರು. ಆದರೆ ಹಾವನ್ನು ಹಿಡಿದ ಬಳಿಕ ಫೋಟೋ ತೆಗೆಸಿಕೊಳ್ಳುತ್ತಿದ್ದರು. ಈ ವೇಳೆ ಹಾವು ಭಟ್ ಅವರಿಗೆ ಕಚ್ಚಿದ ಪರಿಣಾಮ ಅವರು ತೀವ್ರವಾಗಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಯಿತಾದರೂ ಸಾಗಿಸುವ ಮಾರ್ಗಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. 
 
ಇನ್ನು ಈ ಹಿಂದೆಯೂ ಸಾಕಷ್ಟು ಹಾವುಗಳನ್ನು ಹಿಡಿದಿದ್ದ ಇವರು, ಸಾಕಷ್ಟು ಹಾವುಗಳಿಂದ ಕಚ್ಚಿಸಿಕೊಂಡೂ ಇದ್ದರು. ಆದರೆ ಈ ಬಾರಿ ಕಚ್ಚಿಸಿಕೊಂಡ ಅವರು ಸಾವಿನ ದವಡೆ ಸೇರಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

Show comments