Webdunia - Bharat's app for daily news and videos

Install App

450 ರೂಪಾಯಿ ಹಣ ಹಂಚಿಕೆ ವೇಳೆ ಜಗಳ ಓರ್ವನ ಕೊಲೆ

Webdunia
ಸೋಮವಾರ, 17 ಜುಲೈ 2023 (18:00 IST)
ಜುಲೈ 8 ರಂದು ಮಲ್ಲೇಶ್ವರಂನ ಪೈಪ್ ಲೈನ್ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯನ್ನ ಕೊಲೆ ಆಗಿತ್ತು,  ಸ್ಥಳಕ್ಕೆ ಭೇಟಿ ನೀಡಿದ್ದ ಮಲ್ಲೇಶ್ವರಂ ಪೊಲೀಸರು ಅಪರಿಚಿತ ವ್ಯಕ್ತಿ ಶವ ಅಂತ ಮೃತನ ಗುರುತು ಪತ್ತೆ ಹಚ್ಚಲು ಮುಂದಾಗಿದ್ರು. ಪೊಲೀಸರು ಕಳೆದ ನಾಲ್ಕೈದು ದಿನ ಸಿಸಿಟಿವಿಗಳ ಪರಿಶೀಲನೆ ನಡೆಸಿ ಮೃತನ ಗುರುತು ಪತ್ತೆ ಹಚ್ಚಿದ್ದರು. ಅದ್ರೆ ಕೊಲೆ ಆರೋಪಿಯ ಬಗ್ಗೆ ಸಣ್ಣ ಸುಳಿವು ಕೂಡ ಪತ್ತೆಯಾಗಿರಲಿಲ್ಲ. ನಂತರ ಪೊಲೀಸರು ರಸ್ತೆ ಬದಿಯ ಸಿಸಿಟಿವಿ ಪರಿಶೀಲನೆ ವೇಳೆ ಒಂದು ಸಿಸಿಟಿವಿಯಲ್ಲಿ ಓರ್ವ ವ್ಯಕ್ತಿ ಜೋರಾಗಿ ನಡೆದುಕೊಂಡು ಹೋಗುತ್ತಿದ್ದ, ಇದರ ಬೆನ್ನತ್ತಿದ ಪೊಲೀಸರು ಆರೋಪಿ ಪ್ರಭುಕುಮಾರ್ ನನ್ನ ಪತ್ತೆ ಹಚ್ಚಿದ್ದಾರೆ. 

 
ಆರೋಪಿ ಪ್ರಭುಕುಮಾರ್ ಮತ್ತು ಕೊಲೆಯಾದ ಗುರುಮೂರ್ತಿ ಕಬ್ಬಿಣದ ವಸ್ತುವೊಂದನ್ನ ಕಳ್ಳತನ ಮಾಡಿದ್ರಂತೆ. ಅದನ್ನ ಮಾರಾಟ ಮಾಡಿದ್ದು, 450 ಹಣ ಬಂದಿದೆ. ಈ ಹಣವನ್ನ ಮೂವರು ವ್ಯಕ್ತಿಗಳು ಭಾಗ ಮಾಡಿಕೊಳ್ಳುವ ವಿಚಾರಕ್ಕೆ ಜಗಳವಾಗಿದ್ದು, ಈ ವೇಳೆ ಪ್ರಭುಕುಮಾರ್ ಪೈಪ್  ನಿಂದ  ಗುರುಮೂರ್ತಿ ತಲೆ ಹೊಡೆದು ಕೊಲೆ ಮಾಡಿದ್ದಾನೆ. ಸದ್ಯ ಈ ಬಗ್ಗೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments