Webdunia - Bharat's app for daily news and videos

Install App

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Webdunia
ಶುಕ್ರವಾರ, 12 ಆಗಸ್ಟ್ 2022 (17:57 IST)
ಕಾಡಾನೆ ದಾಳಿಗೆ ಕೇರಳ ಮೂಲದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಸರಗೂರು ತಾಲೂಕಿನ ಎತ್ತಿಗೆ ಗ್ರಾಮದ ಹೊರವಲಯದ‌ ಜಮೀನಿನಲ್ಲಿ ನಡೆದಿದೆ. ಬಾಲನ್ ಆನೆ ದಾಳಿಗೆ ಬಲಿಯಾದ ರೈತ. ಈತ ಎತ್ತಿಗೆ ಗ್ರಾಮದಲ್ಲಿ ಜಮೀನು ಗುತ್ತಿಗೆ ಪಡೆದು ಕೃಷಿ ಚಟುವಟಿಕೆ ನಡೆಸುತ್ತಿದ್ದ. ಬೆಳಗ್ಗೆ ಜಮೀನಿನತ್ತ ಬರುತ್ತಿದ್ದ ಆನೆಯನ್ನು ಹಿಮ್ಮೆಟ್ಟಿಸುವ ವೇಳೆ ದಾಳಿ ನಡೆಸಿದ ಆನೆ ಇವರನ್ನು ತುಳಿದು ಸಾಯಿಸಿದೆ ಎನ್ನಲಾಗ್ತಿದೆ.ಬೆಳಗಾದರೂ ಅರಣ್ಯ ಸೇರದೇ ನಾಡಿನಲ್ಲೇ ಆನೆಗಳು ಬೀಡುಬಿಟ್ಟಿವೆ. ಸ್ಥಳಕ್ಕೆ ಅರಣ್ಯ ಇಲಾಖೆ ಮತ್ತು ಪೊಲೀಸರು ದೌಡಾಯಿಸಿದ್ದಾರೆ‌. ಕಾಡಾನೆಗಳ ಉಪಟಳದಿಂದ ಬೆಳೆ ಹಾನಿ ಜೊತೆಗೆ ಜೀವಹಾನಿಯಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಕ್ಷಕ್ಕೆ ಸವಾಲು ಹಾಕಿದವರಿಗೆ ಸಚಿವ ಸ್ಥಾನದ ಭಾಗ್ಯ: ಮಂತ್ರಿಗಿರಿ ಕೈತಪ್ಪಿದಕ್ಕೆ ಕೆರಳಿ ಕೆಂಡವಾದ ತನ್ವೀರ್ ಸೇಠ್

Video: ಮದುಮಗನ ದಿರಿಸಿನಲ್ಲಿ ಮೆಟ್ರೋ ಏರಿದ ಮದುಮಗ: ಕಾರಣ ನಿಜಕ್ಕೂ ಶಾಕಿಂಗ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಕರ್ನಾಟಕ ನೂತನ ಸಚಿವರ ಪ್ರಮಾಣ ವಚನ ಇಂದು: ನೂತನ ಸಚಿವರ ಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments