Webdunia - Bharat's app for daily news and videos

Install App

ನಗರದಲ್ಲಿ ಬೀದಿನಾಯಿಗಳ ಹಾವಳಿ

Webdunia
ಬುಧವಾರ, 21 ಸೆಪ್ಟಂಬರ್ 2022 (21:38 IST)
ನಗರದ್ಯಂತ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಲೇ ಇದೆ . ವಾರದಲ್ಲಿ ಒಂದು ಕಡೆಯಾದರೂ ನಾಯಿಗಳ ಬೇಸತ್ತು, ಅನಾರೋಗ್ಯದ ಬಗ್ಗೆ, ಆಸ್ಪತ್ರೆಗೆ ದಾಖಲಾದ ಬಗ್ಗೆ, ವರದಿಗಳು ಹೆಚ್ಚಾಗುತ್ತಿದೆ. ಬೀದಿ ನಾಯಿಗಳ ಹಾವಳಿಗೆ ಜನರಂತೂ ಭಯಭೀತಗೊಂಡಯ ಪ್ರಾಣಭಯದಲ್ಲೇ ಬದುಕಿದೆ.
 
ನಗರದಲ್ಲಿ ಬೀದಿ ನಾಯಿಗಳು ಹಿಂಡು ಹಿಂಡಾಗಿ ಓಡಾಡುತ್ತಿವೆ. ನಾಯಿ ಅಡ್ಡ ಬಂದು ಬಹಳಷ್ಟು ಮಂದಿ ಅಪಘಾತಕ್ಕೆ ಒಳಗಾಗಿದ್ದಾರೆ. ರಾತ್ರಿ ವೇಳೆ ಒಂಟಿಯಾಗಿ ಹೋಗುವವರ ಮೇಲೆ ಹಿಂಡು ಹಿಂಡಾಗಿ ದಾಳಿ ನಡೆಸುತ್ತಿವೆ. ನಾಯಿಗಳ ಹಾವಳಿಯಿಂದ ತಪ್ಪಿಸಿಕೊಂಡು ಪಾರಾಗುವುದೇ ಒಂದು ಹರಸಾಹಸದ ಕೆಲಸವಾಗಿದೆ.
ಬೀದಿ ನಾಯಿಗಳು ಯಾವಾಗ ಹೇಗೆ ದಾಳಿ ಮಾಡುತ್ತವೆ ಅಂತಾ ಗೊತ್ತಾಗುವುದೇ ಇಲ್ಲ, ನಾಯಿಗಳ ಮಿತಿಮೀರಿದ ವರ್ತನೆಯಿಂದ ಜನರು ಭಯಭೀತಗೊಂಡಿದ್ದು ನಾಯಿಗಳ ಹಾವಳಿಗಳ ವಿರುದ್ಧ ಸಾರ್ವಜನಿಕರು  ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
 
ಇನ್ನೂ ನಗರದ ಯಾವುದೇ ವಾರ್ಡ್ ಗೆ ಹೋದರೂ ನಾಯಿಗಳು ಹಿಂಡು ಹಿಂಡಾಗಿ ಬರುತ್ತದೆ. ಗುಂಪು ಗುಂಪಾಗಿ ಸುತ್ತಾಡುವ ನಾಯಿಗಳು ದಾರಿಯಲ್ಲಿ ಸಂಚರಿಸುವ ವಾಹನ ಸವಾರರನ್ನು ಅಟ್ಟಿಸಿಕೊಂಡು ಹೋಗುತ್ತವೆ. ಕೆಲವು ವೇಳೆ ಶಾಲಾ ಮಕ್ಕಳ ಮೇಲೂ ದಾಳಿ ಮಾಡಿವೆ. ಮಕ್ಕಳ ಮೇಲೆ ನಾಯಿಗಳ ದಾಳಿ ನಡೆದಾಗ, ಆ ಸಂದರ್ಭದಲ್ಲಿ ಸಾರ್ವಜನಿಕರ ಕೂಗು ಎದ್ದಾಗ ದಿಢೀರ್ ಕ್ರಮದ ಭರವಸೆ ನೀಡುವುದು ಮಹಾನಗರ ಪಾಲಿಕೆಯ ಕೆಲಸವಾಗಿದೆ. ಆದ್ರೆ ಪಾಲಿಕೆ ಯಾವುದೇ ಕ್ರಮ ಜರುಗಿಸದೆ ಜಾಣ ಮೌನಕ್ಕೆ ಶರಣಾಗುತ್ತದೆ. ವರ್ಷಗಳು ಉರುಳಿ ಹೋಗುತ್ತಿವೆಯೇ ಹೊರತು ನಾಯಿಗಳ ನಿಯಂತ್ರಣ ಮಾತ್ರ ಸಾಧ್ಯವಾಗುತ್ತಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments