Webdunia - Bharat's app for daily news and videos

Install App

ಮದುವೆಯಾಗುವುದಾಗಿ ದೈಹಿಕ ಸಂಬಂಧ ಬೆಳೆಸಿದ ಪೊಲೀಸ್ ಪೇದೆ

Webdunia
ಭಾನುವಾರ, 31 ಡಿಸೆಂಬರ್ 2017 (09:10 IST)

ಮದುವೆಯಾಗುವುದಾಗಿ ನಂಬಿಸಿದ ಪೊಲೀಸ್ ಪೇದೆಯೊಬ್ಬರು ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವ ಆರೋಪ ಕೇಳಿಬಂದಿದೆ.

ಶಿವಮೊಗ್ಗದ ಕುಂಸಿಯಲ್ಲಿ ಪೇದೆಯಾಗಿರುವ ದಾವಣಗೆರೆಯ ಹರಪನಹಳ್ಳಿ ತಾಲೂಕಿನ ಮಾಡಲಗೇರಿ ಮೂಲದ ಪೇದೆ ಮಂಜುನಾಥ್ ಕಣಿವೆ ಯುವತಿಗೆ ಮೋಸ ಮಾಡಿದ್ದಾನೆ ಎಂದು ಹರಪ್ಪನಹಳ್ಳಿ ತಾಲೂಕು ಹುಲಿಕಟ್ಟೆ ಗ್ರಾಮದ ಮಂಜುಳಾ  ಆರೋಪಿಸಿದ್ದಾಳೆ.

ಕಳೆದ 6 ತಿಂಗಳ ಹಿಂದೆ ಫೋನ್ ಮಾಡುವಾಗ ಅದು ಮಿಸ್ಸಾಗಿ ಪೇದೆ ಮಂಜುನಾಥ್ಗೆ ಹೋಗಿದೆ. ಆಗ ಯುವತಿ ಮಿಸ್ಸಾಗಿ ಬಂದಿದೆ ಎಂದು ಹೇಳಿ ಫೋನ್ ಕಟ್ ಮಾಡಿದ್ದಾಳೆ. ಆದರೆ ಮಂಜುನಾಥ್ ಪದೇ ಪದೇ ಫೋನ್ ಮಾಡಿದ್ದರಿಂದ ಯುವತಿ ಪ್ರೀತಿಯ ಬಲೆಗೆ ಬಿದ್ದಿದ್ದಾಳೆ. ನಂತರ ಮದುವೆಯಾಗುವುದಾಗಿ ನಂಬಿಸಿ, ಯುವತಿಯೊಂದಿಗೆ ದೈಹಿಕ ಸಂಪರ್ಕ ಕೂಡ ಬೆಳೆಸಿದ್ದಾನೆ.

ಆದರೆ ಜಾತಿಯ ನೆಪವೊಡ್ಡಿ ಯುವತಿಯಿಂದ ಮಂಜುನಾಥ್ ದೂರ ಸರಿಯುತ್ತಿದ್ದಾನೆ. ಹೀಗಾಗಿ ನೊಂದ ಯುವತಿ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments