ಅಕ್ಕಿ ವಿಚಾರದಲ್ಲಿ ರಾಜಕೀಯ ನಿರ್ಧಾರ

Webdunia
ಗುರುವಾರ, 15 ಜೂನ್ 2023 (18:30 IST)
ಅಕ್ಕಿ ಇಟ್ಟುಕೊಂಡು ಕೊಡಲಾಗುವುದಿಲ್ಲ ಎಂದರೆ ಇವರನ್ನು ಬಡವರ ವಿರೋಧಿಗಳು ಎಂದು ಕರೆಯದೆ ಬೇರೇನು ಹೇಳಬೇಕು ಎಂದುಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ ಎಂದು ಟ್ವೀಟ್​ ಮೂಲಕ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿಮಾಡಿದೆ. ಜುಲೈ 1ರಂದು ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಟನ್ ಅಗತ್ಯವಿದೆ ಎಂದು ಕೋರಿ ಜೂನ್‌ 9ರಂದು ಪತ್ರ ಬರೆಯಲಾಗಿತ್ತು. ಇದಕ್ಕೆ ಜೂನ್‌ 12ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್​ಗೆ 3400 ರೂ. ದರದಲ್ಲಿ ಅಕ್ಕಿ ಪೂರೈಕೆ ಮಾಡುವುದಾಗಿ ಪತ್ರ ಬರೆದಿತ್ತು. ಇದಾದ ನಂತರ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ ಎಂದು ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮುಂದಿನ ಸುದ್ದಿ
Show comments