Webdunia - Bharat's app for daily news and videos

Install App

ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಕೆಲಸ ಕೊಡಿಸುತ್ತೇನೆ ಎಂದು ವಂಚಿಸಿದ್ದ ಪ್ರಾಧ್ಯಾಪಕ

Webdunia
ಶುಕ್ರವಾರ, 15 ಅಕ್ಟೋಬರ್ 2021 (22:03 IST)
principal
ಬೆಂಗಳೂರು: ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಕೆಲಸ ಕೊಡಿಸುತ್ತೇನೆ ಎಂದು ವಂಚಿಸಿದ್ದ ಪ್ರಾಧ್ಯಾಪಕನೊಬ್ಬರನ್ನು ನಗರದ ವಿಧಾನಸೌಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಸುರೇಶ್ ಅಲಿಯಾಸ್ ನಾಗರಾಜ್ ಬಂಧಿತ ಆರೋಪಿ.
ಮೈಸೂರಿನ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕನಾಗಿದ್ದ ಸುರೇಶ್ ಮೈಸೂರಿನ ಡಿಟಿಪಿ ಸೆಂಟರ್ ಒಂದರಲ್ಲಿ ಟೈಪಿಸ್ಟ್ ಕೆಲಸ ಮಾಡುತ್ತಿದ್ದ ಯುವತಿಗೆ ಶಿಕ್ಷಣ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕಿ ಕೆಲಸ ಕೊಡಿಸುತ್ತೇನೆಂದು ಹೇಳಿ ವಂಚಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಡಿಟಿಪಿ ಸೆಂಟರ್​ಗೆ ಲೆಟರ್ ಒಂದನ್ನು ಟೈಪ್ ಮಾಡಿಸಲು ತೆರಳಿದ್ದ ಆರೋಪಿ ಸುರೇಶ್​​ಗೆ, ತನಗೆ ಎಲ್ಲಾದರೂ ಒಂದು ಒಳ್ಳೆಯ ಕೆಲಸ ಇದ್ದರೆ ಹೇಳಿ ಸರ್ ಎಂದು ಯುವತಿ ಮನವಿ ಮಾಡಿದ್ದಳು. ಬಳಿಕ ಎಲ್ಲಾದರೂ ಯಾಕೆ ಸರ್ಕಾರಿ ಕೆಲಸ ಕೊಡಿಸೋಣ ಎಂದು ಸುರೇಶ್ ಹೇಳಿದ್ದ. ನಂತರ ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಪ್ರಥಮ ದರ್ಜೆ ಸಹಾಯಕಿ ಕೆಲಸ ಇದೆ ಎಂದು ಸುಳ್ಳು ಹೇಳಿದ್ದ.ಕೆಲಸ ಕೊಡಿಸಲು ಆರು ಲಕ್ಷ ರೂ. ಹಣ ಬೇಕು ಎಂದು ಯುವತಿಗೆ ಹೇಳಿ ಬಳಿಕ ಬೇರೊಂದು ಡಿಟಿಪಿ ಸೆಂಟರ್​ನಲ್ಲಿ ಸರ್ಕಾರದ ಲೆಟರ್ ಬಳಸಿ ಯುವತಿಗೆ ಮಹಾರಾಣಿ ಕಾಲೇಜಿನಲ್ಲಿ ಎಫ್‌ಡಿಎ ಎಂದು ನಮೂದಿಸಿರುವ ಆಫರ್ ಲೆಟರ್ ಕೊಟ್ಟಿದ್ದ. ಆಫರ್ ಲೆಟರ್ ಸಹಿತ ಎಂ.ಎಸ್ ಬಿಲ್ಡಿಂಗ್​ನ ಶಿಕ್ಷಣ ಇಲಾಖೆಗೆ ದಾಖಲೆ ಪರಿಶೀಲನೆಗೆ ಯುವತಿ ತೆರಳಿದಾಗ ಸತ್ಯ ಬಯಲಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಂತರ ಶಿಕ್ಷಣ ಇಲಾಖೆಯಿಂದಲೇ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದರಿಂದ ಸದ್ಯ ವಿಧಾನಸೌಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments