Webdunia - Bharat's app for daily news and videos

Install App

ಚಿಂದಿ ಆಯುವವರ ನಡುವೆ ಜಗಳ ಉಂಟಾಗಿ ಕೊಲೆಯಲ್ಲಿ ಅಂತ್ಯ

Webdunia
ಶುಕ್ರವಾರ, 17 ಸೆಪ್ಟಂಬರ್ 2021 (21:35 IST)
ಬೆಂಗಳೂರು: ಚಿಂದಿ ಆಯುವವರ ನಡುವೆ ಜಗಳ ಉಂಟಾಗಿ ಕೊಲೆಯಲ್ಲಿ ಅಂತ್ಯವಾಗಿದ್ದ ಪ್ರಕರಣವನ್ನು ಬೊಮ್ಮನಹಳ್ಳಿ ಠಾಣಾ ಪೊಲೀಸರು ಭೇದಿಸಿದ್ದು, ಮೂವರನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ದೀಪಕ್, ಹೇಮಂತ್​ ಗೋಪ್​, ಮಾದೇಶ್​ ಎಂಬುವರನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಸೆ.13ರಂದು ಬೊಮ್ಮನಹಳ್ಳಿಯ 1ನೇ ಕ್ರಾಸ್​​ನಲ್ಲಿ 20 ರೂ. ವಿಚಾರಕ್ಕೆ ಚಿಂದಿ ಆಯುವವರ ನಡುವೆ ಜಗಳ ಶುರುವಾಗಿತ್ತು. ಈ ವೇಳೆ ದೀಪಕ್, ಹೇಮಂತ್​ ಗೋಪ್​, ಮಾದೇಶ್ ಎಂಬುವರು ಸಂಜಯ್ ಅಲಿಯಾಸ್​ ನೇಪಾಳಿ (30) ಎಂಬಾತನನ್ನು ಹತ್ಯೆ ಮಾಡಿ ತಲೆ ಮರೆಸಿಕೊಂಡಿದ್ದರು ಎನ್ನಲಾಗಿದೆ.
ಆರೋಪಿಗಳು ಸಿಗುವವರೆಗೂ ಸತ್ತವನ ಮಾಹಿತಿಯಾಗಲೀ, ಕೊಲೆ ಮಾಡಿದವರ ಮಾಹಿತಿಯಾಗಲೀ ಸಿಕ್ಕಿರಲಿಲ್ಲ. ವೈನ್ ಶಾಪ್ ಕ್ಯಾಶಿಯರ್ ಕೊಟ್ಟ ಒಂದು ಸುಳಿವಿನಿಂದಾಗಿ ಪೊಲೀಸರು ಹಂತಕರ ಹೆಡೆಮುರಿ ಕಟ್ಟಿದ್ದಾರೆ. ಘಟನೆಯ ದಿನ ಸಂಜಯ್ ಹಾಗೂ ಆರೋಪಿ ದೀಪಕ್ ಒಂದೇ ವೈನ್​ ಶಾಪ್​ನಲ್ಲಿ ಮದ್ಯ ಖರೀದಿಸಿದ್ದರು. ವೈನ್ ಶಾಪ್​ನ ಸಿಸಿಟಿವಿ ದೃಶ್ಯಾವಳಿಗಳನ್ನಾಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದರು.
ನಗರದ ವಿವಿಧ ಭಾಗಗಳಲ್ಲಿ ಚಿಂದಿ ಆಯುವವರನ್ನು ಕರೆತಂದು ಪೊಲೀಸರು ವಿಚಾರಣೆ ನಡೆಸಿದ್ದರು. ತನಿಖೆ ವೇಳೆ ದೀಪಕ್​​, ತಾನೇ ತನ್ನ ಸಹಚರರೊಂದಿಗೆ ಸೇರಿ ಸಂಜಯ್​ನನ್ನು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments