ಚಿಂದಿ ಆಯುವವರ ನಡುವೆ ಜಗಳ ಉಂಟಾಗಿ ಕೊಲೆಯಲ್ಲಿ ಅಂತ್ಯ

Webdunia
ಶುಕ್ರವಾರ, 17 ಸೆಪ್ಟಂಬರ್ 2021 (21:35 IST)
ಬೆಂಗಳೂರು: ಚಿಂದಿ ಆಯುವವರ ನಡುವೆ ಜಗಳ ಉಂಟಾಗಿ ಕೊಲೆಯಲ್ಲಿ ಅಂತ್ಯವಾಗಿದ್ದ ಪ್ರಕರಣವನ್ನು ಬೊಮ್ಮನಹಳ್ಳಿ ಠಾಣಾ ಪೊಲೀಸರು ಭೇದಿಸಿದ್ದು, ಮೂವರನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ದೀಪಕ್, ಹೇಮಂತ್​ ಗೋಪ್​, ಮಾದೇಶ್​ ಎಂಬುವರನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಸೆ.13ರಂದು ಬೊಮ್ಮನಹಳ್ಳಿಯ 1ನೇ ಕ್ರಾಸ್​​ನಲ್ಲಿ 20 ರೂ. ವಿಚಾರಕ್ಕೆ ಚಿಂದಿ ಆಯುವವರ ನಡುವೆ ಜಗಳ ಶುರುವಾಗಿತ್ತು. ಈ ವೇಳೆ ದೀಪಕ್, ಹೇಮಂತ್​ ಗೋಪ್​, ಮಾದೇಶ್ ಎಂಬುವರು ಸಂಜಯ್ ಅಲಿಯಾಸ್​ ನೇಪಾಳಿ (30) ಎಂಬಾತನನ್ನು ಹತ್ಯೆ ಮಾಡಿ ತಲೆ ಮರೆಸಿಕೊಂಡಿದ್ದರು ಎನ್ನಲಾಗಿದೆ.
ಆರೋಪಿಗಳು ಸಿಗುವವರೆಗೂ ಸತ್ತವನ ಮಾಹಿತಿಯಾಗಲೀ, ಕೊಲೆ ಮಾಡಿದವರ ಮಾಹಿತಿಯಾಗಲೀ ಸಿಕ್ಕಿರಲಿಲ್ಲ. ವೈನ್ ಶಾಪ್ ಕ್ಯಾಶಿಯರ್ ಕೊಟ್ಟ ಒಂದು ಸುಳಿವಿನಿಂದಾಗಿ ಪೊಲೀಸರು ಹಂತಕರ ಹೆಡೆಮುರಿ ಕಟ್ಟಿದ್ದಾರೆ. ಘಟನೆಯ ದಿನ ಸಂಜಯ್ ಹಾಗೂ ಆರೋಪಿ ದೀಪಕ್ ಒಂದೇ ವೈನ್​ ಶಾಪ್​ನಲ್ಲಿ ಮದ್ಯ ಖರೀದಿಸಿದ್ದರು. ವೈನ್ ಶಾಪ್​ನ ಸಿಸಿಟಿವಿ ದೃಶ್ಯಾವಳಿಗಳನ್ನಾಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದರು.
ನಗರದ ವಿವಿಧ ಭಾಗಗಳಲ್ಲಿ ಚಿಂದಿ ಆಯುವವರನ್ನು ಕರೆತಂದು ಪೊಲೀಸರು ವಿಚಾರಣೆ ನಡೆಸಿದ್ದರು. ತನಿಖೆ ವೇಳೆ ದೀಪಕ್​​, ತಾನೇ ತನ್ನ ಸಹಚರರೊಂದಿಗೆ ಸೇರಿ ಸಂಜಯ್​ನನ್ನು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೌರಾಯುಕ್ತೆಗೆ ಧಮ್ಕಿ ಪ್ರಕರಣ, ಕೊನೆಗೂ ಕೈ ನಾಯಕ ರಾಜೀವ್ ಗೌಡ ಲಾಕ್‌

ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರು: ಅವರನ್ನು ಓಡಿಸಲು ಎಸ್‌ಐಆರ್ ಜಾರಿಗೊಳಿಸಲು ಯತ್ನಾಳ್ ಒತ್ತಾಯ

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments